ಸಚಿವ ಈಶ್ವರಪ್ಪ 
ರಾಜಕೀಯ

ರಮೇಶ್ ಜಾರಕಿಹೊಳಿ ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ: ಸಚಿವ ಈಶ್ವರಪ್ಪ

ಬೆಳಗಾವಿ ಬಿಜೆಪಿಯಲ್ಲಿ ಯಾವುದೂ ಸರಿಯಿಲ್ಲ ಎಂಬ ವದಂತಿಗಳ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಮೇಶ್ ಜಾರಕಿಹೊಳಿ ಎಂದಿಗೂ ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ: ಬೆಳಗಾವಿ ಬಿಜೆಪಿಯಲ್ಲಿ ಯಾವುದೂ ಸರಿಯಿಲ್ಲ ಎಂಬ ವದಂತಿಗಳ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಮೇಶ್ ಜಾರಕಿಹೊಳಿ ಎಂದಿಗೂ ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯವರು ಅವರು ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ, ಮೊದಲ ಆದ್ಯತೆ ಬಿಜೆಪಿಗೆ ಹಾಗೂ ಎರಡನೇ ಆದ್ಯತೆ ಸಹೋದರ ಲಖನ್ ಗೆ ಎಂದು ಈಗಾಗಲೇ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನಿಗೆ ಚೂರಿ ಹಾಕಿದಂತೆ ಇದೀಗ ರಮೇಶ್ ಜಾರಕಿಹೊಳಿಯವರು ಬಿಜೆಪಿಗೂ ದ್ರೋಹ ಮಾಡುತ್ತಿದ್ದಾರೆಂದು ಈ ಹಿಂದೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದರು.

ಈ ಹೇಳಿಕೆ ವಿರುದ್ಧ ಈಶ್ವರಪ್ಪ ಅವರು ಕಿಡಿಕಾರಿದ್ದಾರೆ. ನಾವು ಈಗಾಗಲೇ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಗಾಗಿ ಹುಡುಕಾಡುತ್ತಿದೆ. ವಿರೋಧ ಪಕ್ಷದ ನಾಯಕ ಎಸ್ಆರ್. ಪಾಟೀಲ್ ಅವರನ್ನೂ ಕಣಕ್ಕಿಳಿಸದೆ, ಹೆಚ್ಚು ಹಣ ಇದ್ದವರಿಗೆ ಟಿಕೆಟ್ ನೀಡುತ್ತಿದ್ದಾರೆಂದು ತಿಳಿಸಿದ್ದಾರೆ.

ಇದೇ ವೇಳೆ ಡಿಸೆಂಬರ್ 12 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ 10 ಹಿಂದುಳಿದ ವರ್ಗಗಳ ಮುಖಂಡರ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?