ಎಚ್.ಸಿ ಮಹದೇವಪ್ಪ 
ರಾಜಕೀಯ

ಬಿಜೆಪಿಯಲ್ಲಿ ಸಿಎಂಗಳು ಇಸ್ಪಿಟ್ ಎಲೆಗಳಂತೆ ಉದುರುತ್ತಿರುತ್ತಾರೆ: ಎಚ್.ಸಿ.ಮಹದೇವಪ್ಪ ವ್ಯಂಗ್ಯ

ಬಿಜೆಪಿಯಲ್ಲಿ ಸಿಎಂ ಗಳು ಇಸ್ಪಿಟ್ ಎಲೆಗಳಂತೆ ಒಂದಾದಮೇಲೆ ಒಂದರಂತೆ ಬದಲಾಗುತ್ತಿರುತ್ತಾರೆ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ವ್ಯಂಗ್ಯವಾಡಿದರು.

ಚಾಮರಾಜನಗರ : ಬಿಜೆಪಿಯಲ್ಲಿ ಸಿಎಂ ಗಳು ಇಸ್ಪಿಟ್ ಎಲೆಗಳಂತೆ ಒಂದಾದಮೇಲೆ ಒಂದರಂತೆ ಬದಲಾಗುತ್ತಿರುತ್ತಾರೆ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ವ್ಯಂಗ್ಯವಾಡಿದರು.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕಣ್ಣು ಮಿಟುಕಿಸುವುದರೊಳಗಾಗಿ ಮುಖ್ಯಮಂತ್ರಿಗಳನ್ನು ಬಿಜೆಪಿ ಬದಲಾಯಿಸಿ ಬಿಡುತ್ತದೆ ಎಂದು ಹೇಳಿದರು.

ಆದಷ್ಟು ಬೇಗ ಮುರುಗೇಶ್ ನಿರಾಣಿ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ, ಹಿಂದೆ ಇದ್ದ ಬಿಜೆಪಿ ಹಾಗೂ ಈಗ ಇರುವ ಬಿಜೆಪಿ ಸರ್ಕಾರ ಯಾವ ಸಂದರ್ಭದಲ್ಲೂ ಜನರ ಆದೇಶವನ್ನು ಪಡೆದು ಅಧಿಕಾರಕ್ಕೆ ಬಂದಿಲ್ಲ.

ವಾಮಮಾರ್ಗದ ಮೂಲಕ ಬೇರೆ ಪಕ್ಷದ ಶಾಸಕರನ್ನು ಅಧಿಕಾರ ಮತ್ತು ಹಣದ ಮುಖಾಂತರ ಕೊಂಡುಕೊಂಡು ಸರ್ಕಾರ ರಚನೆ ಮಾಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು. ಈ ಸರ್ಕಾರಕ್ಕೆ ಸ್ಥಿರತೆ ಇರಲಿದೆಯಾ, ಹೀಗಾಗಿ ಸಹಜವಾಗಿ ಇಸ್ಪಿಟ್ ಎಲೆಯಂತೆ ಒಂದಾದ ಮೇಲೊಂದರಂತೆ ಬದಲಾಗುತ್ತಿರುತ್ತಾರೆ. ಅಂತಿಮವಾಗಿ ನಷ್ಟವಾಗೋದು ರಾಜ್ಯಕ್ಕೆ, ಇದರಿಂದ ತೊಂದರೆ ಅನುಭವಿಸುವವರು ಜನರು, ಇದು ಜನರಿಗೆ ಅರ್ಥವಾದಕೂಡಲೇ ಅವರನ್ನು ಕೆಳಗಿಳಿಸಲಿದ್ದಾರೆ ಎಂದರು.

ಬಿಜೆಪಿ ಮೊದಲಿನಿಂದಲೂ ಆರ್‌ಎಸ್‌ಎಸ್‌ ಹಿಡಿತದಲ್ಲಿ ಕೆಲಸ ಮಾಡುತ್ತಿದೆ. ಸಂವಿಧಾನದ ಮೇಲೆ ನಂಬಿಕೆ ಇಲ್ಲದ ಆರ್‌ಎಸ್‌ಎಸ್‌, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುತ್ತಿದೆ ಎಂದು ಮಹದೇವಪ್ಪ ತೀವ್ರ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT