ಪ್ರಕಾಶ್ ಹುಕ್ಕೇರಿ 
ರಾಜಕೀಯ

ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ನನಗೆ 35 ವರ್ಷಗಳ ರಾಜಕೀಯ ಅನುಭವವಿದೆ: ಪ್ರಕಾಶ್ ಹುಕ್ಕೇರಿ

ಮುಂಬರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ತಿಳಿಸಿದ್ದಾರೆ.

ಬೆಳಗಾವಿ: ಮುಂಬರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ತಿಳಿಸಿದ್ದಾರೆ.

ಚಿಕ್ಕೋಡಿಯಲ್ಲಿ ಮಾತನಾಡಿದ ಅವರು ‘ನಾನು ಕಳೆದ 35 ವರ್ಷಗಳಿಂದ ಜನಪ್ರತಿನಿಧಿಯಾಗಿ ಜನರ ಸೇವೆಯನ್ನು ಮಾಡುತ್ತಾ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕ ಕೂಡ ಆಗಿದ್ದೇನೆ. 1988 ರಲ್ಲಿ ವಿಧಾನಪರಿಷತ್ ಸದಸ್ಯನಾಗಿ ಕೆಲಸ ಮಾಡಿದ ಅನುಭವ ಸಹ ನನಗಿದೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಹಲವು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ, ಪಕ್ಷವನ್ನು ತಳಮಟ್ಟದಿಂದ ಸದೃಡಗೊಳಿಸಲು ಕೆಲಸ ಮಾಡಿದ್ದೇನೆ ಎಂದು  ಹೇಳಿದ್ದಾರೆ. 

ಆರು ಬಾರಿ ಶಾಸಕರಾಗಿರುವ ಪ್ರಕಾಶ್ ಹುಕ್ಕೇರಿ ಒಂದು ಬಾರಿ ಚಿಕ್ಕೋಡಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದ ಅನುಭವವಿದೆ. ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. 

ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಹಾಗೂ ಸತೀಶ್ ಜಾರಕಿಹೊಳಿ ಸೇರಿದಂತೆ  ಕಾಂಗ್ರೆಸ್ ಮುಖಂಡರು ನನಗೆ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನು ನೀಡಬೇಕು. ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕೆಂದು ಜನರು ನನ್ನ ಬಳಿ ಕೇಳಿಕೊಳ್ಳುತ್ತಿದ್ದಾರೆ.

ಈ ನಿಟ್ಟಿನಲ್ಲಿ ಮುಂಬರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನು ಸ್ಪರ್ಧಿಸಲು ಸಿದ್ಧನಾಗಿದ್ದೇನೆ. ಹಾಗಾಗಿ ಕಾಂಗ್ರೆಸ್ ಹೈಕಮಾಂಡ್ ನನಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹುಕ್ಕೇರಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT