ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿಗೆ ಅಸತ್ಯ- ಹಿಂಸೆಯೇ ರೋಲ್ ಮಾಡಲ್: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ನಾಯಕರು ಅಸತ್ಯ ಮತ್ತು ಹಿಂಸಾ ಹಾದಿಯಲ್ಲಿ ಅಪಾರ ನಂಬಿಕೆ ಇಟ್ಟಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಕೇಸರಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಬಿಜೆಪಿ ನಾಯಕರು ಅಸತ್ಯ ಮತ್ತು ಹಿಂಸಾ ಹಾದಿಯಲ್ಲಿ ಅಪಾರ ನಂಬಿಕೆ ಇಟ್ಟಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಕೇಸರಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ, ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಬಿಜೆಪಿಯವರು ದೇಶಭಕ್ತ ಎಂದು ಕರೆಯುತ್ತಾರೆ. ಇಂತಹ ಪಕ್ಷ ಅಧಿಕಾರದಲ್ಲಿ ಇದ್ದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಉಳಿಯುವುದಾರು ಹೇಗೆ ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಮತ್ತು ನಡೆ ತದ್ವಿರುದ್ಧವಾಗಿವೆ. ಅವರು ಏನು ಹೇಳುತ್ತಾರೋ ಅದಕ್ಕೆ ವಿರುದ್ಧದ ಕೆಲಸ ಮಾಡುತ್ತಾರೆ. ಮೋದಿ ಅವರು ಯಾವುದನ್ನು ಉಳಿಸುತ್ತೇನೆ ಎನ್ನುತ್ತಾರೋ ಅದನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ದೇಶದಲ್ಲಿ ಇಂದು ಪ್ರಜಾತಂತ್ರ ವ್ಯವಸ್ಥೆ ಉಳಿದಿದೆಯೇ ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವವರಿಗೆ ದೇಶದ್ರೋಹದ ಸುಳ್ಳು ಆಪಾದನೆಯಡಿ ಜೈಲಿಗೆ ಅಟ್ಟಲಾಗುತ್ತಿದೆ ಎಂದರು.

ಕಳೆದ 10 ತಿಂಗಳುಗಳಿಂದ ರೈತರು ದೇಶದಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಾತುಕತೆಯ ಬದಲು, ಕ್ರೌರ್ಯ ಮತ್ತು ಬಲಪ್ರಯೋಗದ ಮೂಲಕ ಅವರ ಹೋರಾಟವನ್ನು ಅಂತ್ಯಗೊಳಿಸಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ‘ಜೈ ಜವಾನ್, ಜೈ ಕಿಸಾನ್’ ಎಂಬ ಕರೆ ನೀಡಿದರು. ರೈಲು ದುರಂತ ಸಂಭವಿಸಿದಾಗ ಘಟನೆಯ ನೈತಿಕ ಹೊಣೆ ಹೊತ್ತು ಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ಪ್ರಾಮಾಣಿಕತೆಗೆ ಮತ್ತೊಂದು ಹೆಸರು ಲಾಲ್ ಬಹದ್ದೂರ್ ಶಾಸ್ತ್ರಿ. ಈಗಿನ ರಾಜಕಾರಣದಲ್ಲಿ ನೈತಿಕತೆ ಕಣ್ಮರೆಯಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT