ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ: ಕೊಲೆಗೆಡುಕ ಸರ್ಕಾರ ಅಸಹಾಯಕರ ನೆರವಿಗೆ ಧಾವಿಸಲಿ: ಎಚ್ ಡಿ ಕುಮಾರಸ್ವಾಮಿ

ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ  ಅವರು,  ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು 'ಕೊಲೆಗೆಡುಕ ಸರ್ಕಾರ' ಎಂದು ಕಿಡಿಕಾರಿದ್ದಾರೆ.

ಸರ್ಕಾರ ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಇಂಥವರ ನೆರವಿಗೆ ಧಾವಿಸಬೇಕಿತ್ತು. ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ.

ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೋನ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೇರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ