ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ 
ರಾಜಕೀಯ

2023ರ ಚುನಾವಣೆ ಮುನ್ನವೇ ಕಾಂಗ್ರೆಸ್​ ಎರಡು ಹೋಳಾಗುತ್ತೆ: ಸಚಿವ ಈಶ್ವರಪ್ಪ ಭವಿಷ್ಯ

ಮೈಸೂರು ಭಾಗದಲ್ಲಿ 20ಕ್ಕೂ ಹೆಚ್ಚು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಅವರು ಭಾನುವಾರ ವ್ಯಂಗ್ಯವಾಡಿದ್ದಾರೆ.

ಮೈಸೂರು: ಮೈಸೂರು ಭಾಗದಲ್ಲಿ 20ಕ್ಕೂ ಹೆಚ್ಚು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಅವರು ಭಾನುವಾರ ವ್ಯಂಗ್ಯವಾಡಿದ್ದಾರೆ.  

ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. 

ಸಿದ್ದರಾಮಯ್ಯ ಅವರಿಗೆ ಹೇಗಾದರೂ ಸರಿ ಸಿಎಂ ಆಗಬೇಕು ಅನ್ನೋ ಹುಚ್ಚು. ಡಿಕೆ ಶಿವಕುಮಾರ್​ಗೆ ಬಿಜೆಪಿಯವರನ್ನ ಹೇಗಾದರೂ ಎಳೆದುಕೊಳ್ಳಬೇಕು ಅನ್ನೋ ಹುಚ್ಚು‌. ಈ ಇಬ್ಬರು ಹುಚ್ಚರನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಇದಕ್ಕೆ ಬೇರೆ ಏನು ಉತ್ತರ ಇಲ್ಲ ಎಂದು ಈಶ್ವರಪ್ಪ ಲೇವಡಿ ಮಾಡಿದರು. 

ಕೆಲವರಿಗೆ ಎಂಎಲ್ಎ ಸೀಟ್ ಸಿಗಲಿಲ್ಲ ಅನ್ನೋ ಹುಚ್ಚು, ಇನ್ನೂ ಕೆಲವರಿಗೆ ಟಿಕೆಟ್ ಸಿಗಲಿಲ್ಲ ಅನ್ನೋ ಹುಚ್ಚು. ಸಿದ್ದರಾಮಯ್ಯರಿಗೆ ಸಿಎಂ ಆಗುವ ಹುಚ್ಚು ಕನಸು ಎಂದು ವ್ಯಂಗ್ಯವಾಡಿದ ಅವರು, ಕಳೆದ ಚುನಾವಣೆಯಲ್ಲಿ ಜನ ಯಾಕೆ ನಿಮ್ಮನ್ನು ಕೈ ಬಿಟ್ಟರು? ಚಾಮುಂಡೇಶ್ವರಿಯಲ್ಲಿ ಯಾಕೆ ಸೋತಿರಿ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ಜಾತಿಗಣತಿ ಗಣತಿ ವಿಚಾರವಾಗಿ,  ಸಿದ್ದರಾಮಯ್ಯನವರು ಸಂಘಟನೆ ಮಾಡಲು ಅಡ್ಡ ದಾರಿ ತುಳಿದಿದ್ದಾರೆ. ಸದನದಲ್ಲಿ ಜಾತಿಗಣತಿ ಬಗ್ಗೆ ಯಾಕೆ ಮಾತನಾಡಲಿಲ್ಲ. ಸಿದ್ದರಾಮಯ್ಯನವರೇನು ಬಾಯಲ್ಲಿ ಕಡುಬು ಇಟ್ಟುಕೊಂಡಿದ್ರಾ..? ಸದನದಲ್ಲಿ ಜಾತಿಗಣತಿಯ ಧ್ವನಿ ಮಾಡ್ತೀವಿ ಅಂದ್ರಿ ಮಾಡುದ್ರಾ..? ಯಾಕ್ ಜಾತಿಗಣತಿ ಬಗ್ಗೆ ಮಾತಾಡಲಿಲ್ಲ. ಹಿಂದುಳಿದಿರುವ, ಅಲ್ಪಸಂಖ್ಯಾತರು ನಿಮಗೆ ಹೆಸರಿಗೆ ಮಾತ್ರನಾ..?  ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಜಾತಿಗಣತಿ ವರದಿ ಸಿದ್ದವಾಗಿದ್ದರೂ ಕುಮಾರಸ್ವಾಮಿ ಮಂಡಿಸಲಿಲ್ಲ. ಆಗ ನಿಮ್ಮ ಬೆಂಬಲ ವಾಪಸ್ ತಗೋಬೇಕಿತ್ತು. ಯಾಕೆ ತಗೆದುಕೊಳ್ಳಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಈಶ್ವರಪ್ಪ ಪ್ರಶ್ನೆ ಮಾಡಿದರು.

ಇವರಿಗೆ ಯಾವುದೂ ಬೇಕಾಗಿಲ್ಲ. ಅಧಿಕಾರವೊಂದೇ ಇವರ ಗುರಿ. ಮುಂದಿನ ವಿಧಾನಸಭೆ ಚುನಾವಣೆಗೆ ಮುಂಚೆಯೇ ಕಾಂಗ್ರೆಸ್ ಎರಡು ಹೋಳಾಗುತ್ತೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಇನ್ನೂ ಒಂದೂವರೆ ವರ್ಷ ಕಾಯುವ ಅವಶ್ಯಕತೆ ಇಲ್ಲ. ಡಿ.ಕೆ. ಶಿವಕುಮಾರ್​ಗೂ ಅಧಿಕಾರ ಬೇಕು. ಸಿದ್ದರಾಮಯ್ಯರಿಗೂ ಅಧಿಕಾರ ಬೇಕು. ಇದರಿಂದ ಕಾಂಗ್ರೆಸ್ ಎರಡು ಹೋಳಾಗುತ್ತೆ ಎಂದು ಮೈಸೂರಿನಲ್ಲಿ ಭವಿಷ್ಯ ನುಡಿದರು.

ಮುಂದಿನ ಚುನಾವಣೆ ಅತಂತ್ರ ಮಾಡುವುದು ಜೆಡಿಎಸ್ ಉದ್ದೇಶ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿ ಅವರ ಉದ್ದೇಶವನ್ನು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಕಷ್ಟ, ನೋವನ್ನ ಹೇಳಿಕೊಂಡಿದ್ದಾರೆ. ಅತಂತ್ರ ಸ್ಥಿತಿಯಾದರೆ ಯಾವುದಾರೂ ಪಕ್ಷದ ಜೊತೆ ಸೇರಿಕೊಂಡು ಆಡಳಿತ ಮಾಡಬಹುದು ಅನ್ನೋ ಭ್ರಮೆಯಲ್ಲಿ ಇದ್ದಾರೆ. ಅತಂತ್ರ ಅನ್ನೋ ಭಾವನೆ ಕುಮಾರಸ್ವಾಮಿ ಅವರಲ್ಲಿ ಇರಬಹುದು. ಅವರ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT