ಲಖೀಂಪುರ ಹಿಂಸಾಚಾರ 
ರಾಜಕೀಯ

ಬ್ರಿಟಿಷರ ಬೂಟಿನ ರುಚಿ ಕಂಡಿರುವ ಬಿಜೆಪಿಗರು ಅವರಿಗಿಂತ ಕ್ರೂರಿಗಳು: ಹೊರಗಿನವರಿಗಿಂತ ಒಳಗಿನವರ ದೌರ್ಜನ್ಯವೇ ಹೆಚ್ಚು ಆಘಾತಕಾರಿ!

ಬ್ರಿಟಿಷರ ಬೂಟಿನ ರುಚಿ ಕಂಡಿರುವ ಬಿಜೆಪಿಗರು ಬ್ರಿಟಿಷರಿಗಿಂತ ಕ್ರೂರಿಗಳಾಗಿದ್ದಾರೆ' ಎಂದು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಹರಿಹಾಯ್ದಿದೆ.

ಬೆಂಗಳೂರು: ಬ್ರಿಟಿಷರ ಬೂಟಿನ ರುಚಿ ಕಂಡಿರುವ ಬಿಜೆಪಿಗರು ಬ್ರಿಟಿಷರಿಗಿಂತ ಕ್ರೂರಿಗಳಾಗಿದ್ದಾರೆ' ಎಂದು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಹರಿಹಾಯ್ದಿದೆ.

ಬ್ರಿಟಿಷರು ಕೂಡ ಬಹಳ ಗೌರವದಿಂದ ನೋಡಿಕೊಳ್ಳುತ್ತಿದ್ದರು' ಎಂಬ ಕಾಂಗ್ರೆಸ್‌ ಮುಖಂಡ ಡಿ.ಕೆ. ಶಿವಕುಮಾರ್‌ ಹೇಳಿಕೆಯ ವಿಡಿಯೊ ತುಣುಕನ್ನು ಹಂಚಿಕೊಂಡಿರುವ ಬಿಜೆಪಿ, ದೇಶವನ್ನು ಸುದೀರ್ಘ ಕಾಲ ದಾಸ್ಯಕ್ಕೆ ತಳ್ಳಿದ ಬ್ರಿಟಿಷರ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಡಿದ ಮಾತುಗಳಿವು ಎಂದಿದೆ.

ಇದಕ್ಕೆ ಪ್ರತಿಕ್ರಿಯಿಸಿ  ಟ್ವೀಟ್ ಮಾಡಿರುವ ಕಾಂಗ್ರೆಸ್‌, 'ಬ್ರಿಟಿಷರು ಅಹಿಂಸಾ ಸತ್ಯಾಗ್ರಹಕ್ಕೆ ಮಣಿದಿದ್ದರು, ಆದರೆ ಬಿಜೆಪಿಗರು ರೈತರ ಅಹಿಂಸಾ ಪ್ರತಿಭಟನೆಯಲ್ಲಿ ಮಾರಣಹೋಮ ನಡೆಸಿದರು. ಹೊರಗಿನವರ ದೌರ್ಜನ್ಯಕ್ಕಿಂತ ಒಳಗಿನವರ ದೌರ್ಜನ್ಯವೇ ಹೆಚ್ಚು ಆಘಾತಕಾರಿ ಎಂದು ಕಾಂಗ್ರೆಸ್‌ ಹೇಳಿದೆ.

'ತ್ಯಾಗ, ಬಲಿದಾನದಿಂದ ಪಡೆದ ಸ್ವಾತಂತ್ರ್ಯವನ್ನು ಒಂದೇ ಮಾತಿನಲ್ಲಿ ಕಾಂಗ್ರೆಸ್‌ ಅಧ್ಯಕ್ಷರು ನಾಶ ಮಾಡಿದ್ದಾರೆ. ಎಷ್ಟಾದರೂ ನೀವು ನಕಲಿ ಕಾಂಗ್ರೆಸ್ಸಿಗರಲ್ಲವೇ, ಇಲ್ಲಿಯವರಿಗಿಂತ ಹೊರಗಿನವರೇ ನಿಮಗೆ ಆಪ್ತರಾಗುತ್ತಾರೆ' ಎಂದು ಬಿಜೆಪಿ ಟ್ವೀಟ್‌ನಲ್ಲಿ ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT