ರಾಜಕೀಯ

ಬಿಜೆಪಿ ನಾಯಕರ ವಾಹನ ಬಂದಾಗ ಎಚ್ಚರ, ಎಚ್ಚರ…!

Lingaraj Badiger

ಬೆಂಗಳೂರು: ಬಿಜೆಪಿ ನಾಯಕರ ವಾಹನ ಬಂದಾಗ ಬಹಳ ಎಚ್ಚರಿಕೆ, ಜೋಪಾನ ಎಂದು ಕೆಪಿಸಿಸಿ ಅದ್ಯಕ್ಷ  ಡಿ.ಕೆ .ಶಿವಕುಮಾರ್ ಅವರು ಶುಕ್ರವಾರ ಜನತೆಗೆ ಕಿವಿಮಾತು, ಬುದ್ದಿಮಾತು ಹೇಳಿದ್ದಾರೆ.

ಬಿಜೆಪಿ ನಾಯಕರ ಕಾರು ನಿಮ್ಮ ಅಕ್ಕ ಪಕ್ಕದಲ್ಲಿ ಹೋಗುವಾಗ ಮೊಬೈಲ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ಎಂಬುದೇ ತಿಳಿಯುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಮೂದಲಿಸಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವರೊಬ್ಬರ ಪುತ್ರನ ಕಾರು ಹರಿದ ಘಟನೆಯಿಂದ ಆರು ರೈತರು ಮೃತಪಟ್ಟ ಪ್ರಕರಣವನ್ನು ಉಲ್ಲೇಖಿಸಿ ವಿಡಿಯೋ ಬಿಡುಗಡೆ ಮಾಡಿರುವ ಡಿಕೆ ಶಿವಕುಮಾರ್, ಬಿಜೆಪಿ ನಾಯಕರು ಸಾಮಾನ್ಯ ಜನರ ಮೇಲೆ ವಾಹನ ಚಲಾಯಿಸಿದ ದಾಖಲೆ ಹೊಂದಿದ್ದಾರೆ. ಕೇಸರಿ ಪಕ್ಷದ ಕುರಿತು ಜನರು ಜಾಗೃತರಾಗಿರಬೇಕು. ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮೆರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವಿಡಿಯೋ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ ಎಂದು ಹೇಳಿದ್ದಾರೆ.

SCROLL FOR NEXT