ವಿಶ್ವನಾಥ್ 
ರಾಜಕೀಯ

"ರಾಷ್ಟ್ರ ರಾಜಕಾರಣದ ಬಗ್ಗೆ ಸಿದ್ದರಾಮಯ್ಯಗೆ ಪುಕ್ಕಲುತನವಿದೆ": ಎಚ್ ವಿಶ್ವನಾಥ್ ವ್ಯಂಗ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದ ಬಗ್ಗೆ ಪುಕ್ಕಲುತನವಿದೆ. ಆದ್ದರಿಂದಲೇ ರಾಷ್ಟ್ರ ಮಟ್ಟದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಲು ಹಿಂಜರಿಯುತ್ತಿದ್ದಾರೆ...

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದ ಬಗ್ಗೆ ಪುಕ್ಕಲುತನವಿದೆ. ಆದ್ದರಿಂದಲೇ ರಾಷ್ಟ್ರ ಮಟ್ಟದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಲು ಹಿಂಜರಿಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಸೋಮವಾರ ವ್ಯಂಗ್ಯವಾಡಿದ್ದಾರೆ.

ಇಂದು ಮೈಸೂರು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ದೇವೇಗೌಡ ಅವರು ದೇಶದ ಪ್ರಧಾನಿಯಾದರು. ಮೂರು ಬಾರಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಪ್ರಧಾನಿಯಾದರು. ಪ್ರಧಾನಿ ಹುದ್ದೆ ಎನ್ನುವುದು ರಾಷ್ಟ್ರದ ಕಾರ್ಯಾಂಗದ ಅತ್ಯುನ್ನತ ಹುದ್ದೆ ಎಂದರು.

ಪ್ರಧಾನಿ ಅಭ್ಯರ್ಥಿ ಮಾಡುವುದಾದರೆ ರಾಷ್ಟ್ರ ರಾಜಕಾರಣಕ್ಕೆ ಬರುತ್ತೇನೆಂದು ಕಾಂಗ್ರೆಸ್ ವರಿಷ್ಠರಿಗೆ ಸಿದ್ದರಾಮಯ್ಯ ಹೇಳಬೇಕಿತ್ತು. ಹೇಳಲಿಲ್ಲ. ದೇವೇಗೌಡರು, ನರೇಂದ್ರ ಮೋದಿ ಪ್ರದರ್ಶಿಸಿದ ಧೈರ್ಯ ಸಿದ್ದರಾಮಯ್ಯ ಅವರಿಗೆ ಇಲ್ಲ. ಮತ್ತೇಕೆ  ಪ್ರಧಾನಿ ಮೋದಿ ಅವರ ವಿರುದ್ಧ ಟೀಕೆ ಮಾಡಬೇಕು ಎಂದು ಪ್ರಶ್ನಿಸಿದರು.

ದೇವೇಗೌಡರು ಪ್ರಧಾನಿಮಂತ್ರಿಯಾದ ಸಂದರ್ಭದಲ್ಲಿ ತಾನು ಕಾಂಗ್ರೆಸ್ ಪಕ್ಷದಲ್ಲಿದ್ದೆ. ಆದರೂ ಕನ್ನಡಿಗರೊಬ್ಬರು ಪ್ರಧಾನಿಯಾದರು ಎಂದು ಎಲ್ಲರಿಗೂ ಸಿಹಿ ಹಂಚಿದ್ದೆ. ಇದರಲ್ಲಿ ಅಸೂಯೆ ಪಡುವಂಥದ್ದು ಇಲ್ಲ. ಕನ್ನಡಿಗರು ಪ್ರಧಾನಿಯಾಗೋದು ಹೆಮ್ಮೆಯ ವಿಚಾರ ಎಂದು ಸ್ಮರಿಸಿದರು.

ಸಿದ್ದರಾಮಯ್ಯ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದರಲ್ಲಿ ಅರ್ಥವಿಲ್ಲ. ಇವರು ಮುಖ್ಯಮಂತ್ರಿಯಾಗಿದ್ದಾಗ 326 ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಅವರ ಸಚಿವ ಸಂಪುಟ ಆ ವಿಚಾರವನ್ನೇ ತಳ್ಳಿಹಾಕಿತು. ಈಗ ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ನೀವು ಯಾರ ಪರ ಇದ್ದೀರಿ ಅಂತ ಸ್ಪಷ್ಟವಾಗಿ ಹೇಳಿ ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT