ಬಸವರಾಜ ಬೊಮ್ಮಾಯಿ 
ರಾಜಕೀಯ

ನಿಮ್ಮ ಕೈಗಳಲ್ಲಿ ರಕ್ತ ಅಂಟಿಸಿಕೊಂಡು ಹೇಗೆ ಮಲಗುತ್ತೀರೋ ದೇವರಿಗೇ ಗೊತ್ತು: ಸಿದ್ದರಾಮಯ್ಯಗೆ ಸಿಎಂ ತಿರುಗೇಟು

ನೈತಿಕ ಪೊಲೀಸ್‌ಗಿರಿ ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಕ್ರಿಯೆಗೆ ಸಹಜವಾಗಿಯೇ ಪ್ರತಿಕ್ರಿಯೆ ಇರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದ ಮಾತುಗಳಿಗೆ ಆಕ್ರೋಶ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ದರು.

ಬೆಂಗಳೂರು: ನೈತಿಕ ಪೊಲೀಸ್‌ಗಿರಿ ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಕ್ರಿಯೆಗೆ ಸಹಜವಾಗಿಯೇ ಪ್ರತಿಕ್ರಿಯೆ ಇರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದ ಮಾತುಗಳಿಗೆ ಆಕ್ರೋಶ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ದರು. ಇದಕ್ಕೆ ಬೊಮ್ಮಾಯಿ ಅವರು ತಿರುಗೇಟು ನೀಡಿದ್ದಾರೆ.

ಮಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಹೇಳಿಕೆಯನ್ನು ಸರಣಿ ಟ್ವೀಟ್‌ಗಳಲ್ಲಿ ಸಿದ್ದರಾಮಯ್ಯ ಖಂಡಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಟ್ವಿಟ್ಟರ್‌ನಲ್ಲಿಯೇ ಸಿದ್ದರಾಮಯ್ಯ ಅವರಿಗೆ ಬಸವರಾಜ ಬೊಮ್ಮಾಯಿ ಖಾರವಾಗಿ ಉತ್ತರ ನೀಡಿದ್ದಾರೆ. "ಟಿಪ್ಪು ಸುಲ್ತಾನ ತನ್ನ ಆಳ್ವಿಕೆಯಲ್ಲಿ ಮಾಡಿದಂತೆ ನೀವು ಮುಖ್ಯಮಂತ್ರಿಯಾಗಿದ್ದಾಗ ಹಿಂದೂ ಕಾರ್ಯಕರ್ತರನ್ನು ಸಾಯಿಸುವ ಮೂಲಕ ಹಿಂದೂ ವಿರೋಧಿಗಳ ಆದರ್ಶಪ್ರಾಯರಾಗಿದ್ದಿರಿ. ನಾನು ನಿಮ್ಮಿಂದ ಆಡಳಿತ ಅಥವಾ ಪೊಲೀಸಿಂಗ್ ಕಲಿಯಬೇಕಿಲ್ಲ. ನಿಮ್ಮ ಸರ್ಕಾರದ ಅಡಿಯಲ್ಲಿ ಯಾವುದೇ ರಕ್ಷಣೆ ಇಲ್ಲದೆ ಕುಳಿತಿದ್ದ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಿಸಲು ಸಮರ್ಥ ಪೊಲೀಸ್ ಪಡೆ ನಮ್ಮ ಬಳಿ ಇದೆ' ಎಂದು ಬೊಮ್ಮಾಯಿ ಹೇಳಿದ್ದಾರೆ.

ಪ್ರತಿಯೊಂದು ಕ್ರಿಯೆಯೂ ತಕ್ಕ ಪ್ರತಿಕ್ರಿಯೆ ನಮ್ಮ ಸಮಾಜದಲ್ಲಿ ಇರುತ್ತದೆ ಮತ್ತು ಕಾನೂನು ತನ್ನದೇ ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಾನು ಹೇಳಿದ್ದೆ. ನಿಮ್ಮ ಆಳ್ವಿಕೆಯಲ್ಲಿ ಹಿಂದೂಗಳನ್ನು ಮೂಲೆ ಮೂಲೆಯಲ್ಲಿಯೂ ಕೊಂದಿರುವಂತೆ ಅಲ್ಲ. ನೀವು ಕನ್ನಡಿಯನ್ನು ನಿಮ್ಮ ಕಡೆಗೆ ತಿರುಗಿಸಿಕೊಳ್ಳಬೇಕಿದೆ. ನಿಮ್ಮ ಕೈಗಳಲ್ಲಿ ರಕ್ತ ಅಂಟಿಸಿಕೊಂಡು ಹೇಗೆ ಮಲಗುತ್ತೀರೋ ಎಂದು ದೇವರಿಗೇ ಗೊತ್ತು' ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT