ರಾಜಕೀಯ

ಅಂದಿನ ಬಜರಂಗದಳ ಕಾರ್ಯಕರ್ತ ಕೋಟಿ ರವಿ ಆಗಿದ್ದು ಹೇಗೆ? ಹಿಂದುತ್ವ ಜಪದಿಂದ ಇಷ್ಟೊಂದು ಆಸ್ತಿ ಸಂಪಾದಿಸಬಹುದೇ?

Shilpa D

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ಹರಿಹಾಯ್ದಿದೆ, ನಿಮ್ಮ ಸಂಬಂಧಿಯನ್ನು ಮುಂದಿಟ್ಟುಕೊಂಡು ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆಗಳನ್ನು ಪಡೆದಿರುವ ನೀವು ಎಷ್ಟೆಷ್ಟು ಕಮಿಷನ್ ಕೊಟ್ಟಿದ್ದೀರ? ಎಂದು ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಾರಿಗೆ ಬಸ್ಸಿನಲ್ಲಿ ಓಡಾಡುತ್ತಿದ್ದ ಅಂದಿನ ಬಜರಂಗದಳ ಕಾರ್ಯಕರ್ತ, ಇಂದಿನ ಫುಲ್ ಟೈಂ ರಾಜಕಾರಣಿ ಸಿಟಿ ರವಿ ಕೋಟಿರವಿ ಆಗಿದ್ದು ಹೇಗೆ? ಎಲ್ಲಿ, ಯಾರಿಂದ, ಎಷ್ಟೆಷ್ಟು ಕಲೆಕ್ಷನ್ ಮಾಡಿದಿರಿ? ಲೂಟಿರವಿ ಎಂದು ಪ್ರಶ್ನಿಸಿದೆ.

2004-2010ರ ಮಧ್ಯೆ ನಿಮ್ಮ ಆಸ್ತಿ 49 ಲಕ್ಷದಿಂದ 3.18 ಕೋಟಿ ರು ಏರಿಕೆಯಾಗಿದೆ ಎಂಬ ದೂರು ದಾಖಲಾಗಿತ್ತು. 2018 ರಲ್ಲಿ ನೀವೇ ಘೋಷಿಸಿದ ಅಧಿಕೃತ ಆಸ್ತಿ 5 ಕೋಟಿಗೂ ಅಧಿಕ, ನಿಮ್ಮ ಕುಟುಂಬದ್ದು ಇನ್ನೂ ಅಧಿಕ, ಬೇನಾಮಿ ಅತ್ಯಧಿಕವಾಗಿದೆ ಹಿಂದುತ್ವ ಜಪದಿಂದ ಈ ಪ್ರಮಾಣದ ಆಸ್ತಿ ಸಂಪಾದಿಸಬಹುದೇ ಲೂಟಿರವಿ ಅವರೇ? ಎಂದು ಕಾಂಗ್ರೆಸ್ ಲೇವಡಿ ಮಾಡಿದೆ

SCROLL FOR NEXT