ಸಿದ್ದರಾಮಯ್ಯ 
ರಾಜಕೀಯ

2023ರ ಚುನಾವಣೆ ಬಳಿಕ ಕಾಂಗ್ರೆಸ್ ಉನ್ನತ ನಾಯಕರಿಂದಲೇ ಮುಖ್ಯಮಂತ್ರಿಗಳ ಆಯ್ಕೆ: ಸಿದ್ದರಾಮಯ್ಯ

2023ರ ರಾಜ್ಯ ವಿಧಾನಸಭೆ ಚುನಾವಣೆ ಪೂರ್ಣಗೊಂಡ ಬಳಿಕ ಕಾಂಗ್ರೆಸ್ ಉನ್ನತ ನಾಯಕರು ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುತ್ತಾರೆ. ಅವರು ಯಾರನ್ನೇ ಸೂಚಿಸಿದರೂ ನಿರ್ಧಾರಕ್ಕೆ ಎಲ್ಲರೂ ತಲೆ ಬಾಗುತ್ತೇವೆಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಪೂರ್ಣಗೊಂಡ ಬಳಿಕ ಕಾಂಗ್ರೆಸ್ ಉನ್ನತ ನಾಯಕರು ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುತ್ತಾರೆ. ಅವರು ಯಾರನ್ನೇ ಸೂಚಿಸಿದರೂ ನಿರ್ಧಾರಕ್ಕೆ ಎಲ್ಲರೂ ತಲೆ ಬಾಗುತ್ತೇವೆಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದೆ. ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿಗಳನ್ನಾಗಿ ಯಾರು ಮಾಡಿದರು? ಶಾಸಕರು ಮಾಡಿದರೇ? ಬಿಜೆಪಿ ಹೈಕಮಾಂಡ್ ಹಾಗೂ ಆರ್'ಎಸ್ಎಸ್ ಮಾಡಿತು. ಅದೇ ರೀತಿ ನಮ್ಮಲ್ಲೂ ಹೈಕಮಾಂಡ್ ಇದೆ ಎಂದು ಹೇಳಿದ್ದಾರೆ. 

ಇದೇ ವೇಳೆ ರಾಷ್ಟ್ರೀಯ ರಾಜಕೀಯಕ್ಕೆ ಹೈಕಮಾಂಡ್ ಆಹ್ವಾನ ನೀಡಿದೆ ಎಂಬ ಊಹಾಪೋಹಗಳ ವಿರುದ್ಧ ಕಿಡಿಕಾರಿದ ಅವರು, ಸೋನಿಯಾ ಗಾಂಧಿ ಭೇಟಿ ವೇಳೆ ಈ ವಿಚಾರ ಕುರಿತು ಚರ್ಚೆಗಳೇ ನಡೆದಿಲ್ಲ. ನನಗೀಗ 74 ವರ್ಷ ವಯಸ್ಸಾಗಿದೆ. ಗರಿಷ್ಠ ಎಂದರೂ ಇನ್ನೈದು ವರ್ಷ ರಾಜಕೀಯದಲ್ಲಿ ಇರಬಹುದು. ಕರ್ನಾಟಕ ರಾಜಕೀಯಲ್ಲಿಯೇ ನಾನು ಉತ್ತಮವಾಗಿದ್ದೇನೆ. ಅದರಲ್ಲಿಯೇ ನನಗೆ ಸಂತೋಷವಿದೆ ಎಂದು ತಿಳಿಸಿದ್ದಾರೆ. 

ಬಳಿಕ ರಾಹುಲ್ ಗಾಂಧಿ ಕುರಿತು ಮಾತನಾಡಿ, ರಾಹುಲ್ ಅವರೇ ಪಕ್ಷದ ಅಧ್ಯಕ್ಷರಾಗಬೇಕು. ಸಾಕಷ್ಟು ಬಾರಿ ಈ ಬಗ್ಗೆ ನಾನು ಮಾತನಾಡಿದ್ದೇನೆಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ; ಅಜಿತ್ ಪವಾರ್ ದುರಂತದ ಬಳಿಕ 2ನೇ ಘಟನೆ

ಇರಾನ್ ಯುದ್ಧದ ಎಫೆಕ್ಟ್: ಅಮೆರಿಕದ ಶಸ್ತ್ರಾಸ್ತ್ರ ದಾಸ್ತಾನು ಖಾಲಿ? ರಕ್ಷಣಾ ಕಂಪನಿಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ಹೆಚ್ಚಿಸಲು ಪೆಂಟಗನ್ ಸೂಚನೆ

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಜಾರ್ಖಂಡ್ JSSC 2024 ಪ್ರಶ್ನೆಪತ್ರಿಕೆ ಸೋರಿಕೆ: 120 ಉತ್ತರಗಳು, WhatsApp ಮೂಲಕ ಸೋರಿಕೆ; CID ಸ್ಫೋಟಕ ವರದಿ

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ