ವೀರಪ್ಪ ಮೊಯ್ಲಿ 
ರಾಜಕೀಯ

ಪ್ರಧಾನಿಯಾಗಿ ರಾಜೀವ್ ಗಾಂಧಿ ಆಳ್ವಿಕೆ ಸುವರ್ಣ ಯುಗ: ವೀರಪ್ಪ ಮೊಯ್ಲಿ

ದಿವಂಗತ ರಾಜೀವ್ ಗಾಂಧಿಯವರ ಐದು ವರ್ಷಗಳ ಪ್ರಧಾನ ಮಂತ್ರಿ ಅಧಿಕಾರಾವಧಿಯನ್ನು (1984-1989) ಭಾರತದ ಸುವರ್ಣ ಯುಗ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಂಗಳವಾರ ಬಣ್ಣಿಸಿದ್ದಾರೆ.

ಹೈದರಾಬಾದ್: ದಿವಂಗತ ರಾಜೀವ್ ಗಾಂಧಿಯವರ ಐದು ವರ್ಷಗಳ ಪ್ರಧಾನ ಮಂತ್ರಿ ಅಧಿಕಾರಾವಧಿಯನ್ನು  (1984-1989) ಭಾರತದ ಸುವರ್ಣ ಯುಗ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಂಗಳವಾರ ಬಣ್ಣಿಸಿದ್ದಾರೆ.

ಚಾರ್ ಮಿನಾರ್ ನಲ್ಲಿ ನಡೆದ ಸದ್ಭಾವನಾ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ ಅವರು ತಮ್ಮ ಜೀವನವನ್ನೇ ರಾಷ್ಟ್ರಕ್ಕಾಗಿ ಮುಡಿಪಿಟ್ಟರು. ಅಸ್ಸಾಂ, ತ್ರಿಪುರಾ, ತಮಿಳುನಾಡಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅವರು ಏಕಾಂಗಿಯಾಗಿ ಪರಿಹರಿಸಿದ್ದರು ಎಂದು ಮೊಯ್ಲಿ ವಿವರಿಸಿದರು.

ರಾಜೀವ್ ಗಾಂಧಿ ಆಳ್ವಿಕೆಯ ಲಕ್ಷಣಗಳೆಂದರೆ ಅಭಿವೃದ್ಧಿ, ಏಕತೆ, ಶಾಂತಿ ಮತ್ತು ಕೋಮು ಸೌಹಾರ್ದತೆ. ಅವರು ರಾಜಕೀಯದಲ್ಲಿ ನೈತಿಕ ಮೌಲ್ಯಗಳಿಗೆ ಬೆಲೆ ಕೊಡುತ್ತಿದ್ದರು, 2023 ರಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಪುನರಾಗಮನವನ್ನು ಮಾಡಲಿದೆ ಎಂದು ಮೊಯ್ಲಿ ಭವಿಷ್ಯ ನುಡಿದರು.

ರಾಜೀವ್ ಗಾಂಧಿಯವರ ಸದ್ಭಾವನಾ ಯಾತ್ರೆಯ ನೆನಪಿಗಾಗಿ ಸದ್ಭಾವನಾ ದಿವಸ್  ಕಾರ್ಯಕ್ರಮ ನಡೆಸಲಾಗುತ್ತದೆ. ಸಮಾಜದ ವಿವಿಧ ವಿಭಾಗಗಳಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಲು ಅವಳಿ ನಗರದಲ್ಲಿ 31 ವರ್ಷಗಳ ಹಿಂದೆ ಇದನ್ನು ಆರಂಭಿಸಲಾಯಿತು. ವೀರಪ್ಪ ಮೊಯ್ಲಿ ಅವರಿಗೆ ಸದ್ಭಾವನಾ ಪ್ರಶಸ್ತಿ ನೀಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!