ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಆರ್ ಎಸ್ ಎಸ್ ಬಗ್ಗೆ ಸಿದ್ದರಾಮಯ್ಯ, ಕುಮಾರಸ್ವಾಮಿಯವರು ಮನಬಂದಂತೆ ಮಾತನಾಡುವುದು ಸರಿಯಲ್ಲ: ಬಿ ಎಸ್ ಯಡಿಯೂರಪ್ಪ 

ಆರ್ ಎಸ್ ಎಸ್ ಬಗ್ಗೆ ರಾಜಕೀಯ ನಾಯಕರು ಹಗುರವಾಗಿ, ಮನಬಂದಂತೆ ಮಾತನಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಜಯಪುರ: ಆರ್ ಎಸ್ ಎಸ್ ಬಗ್ಗೆ ರಾಜಕೀಯ ನಾಯಕರು ಹಗುರವಾಗಿ, ಮನಬಂದಂತೆ ಮಾತನಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಜಯಪುರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರ್ ಎಸ್ ಎಸ್ ಬಗ್ಗೆ ಮಾತನಾಡಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಯವರು ಜನರ ಮುಂದೆ ಇನ್ನಷ್ಟು ಚಿಕ್ಕವರಾಗುತ್ತಾರೆ. ಮಾಜಿ ಮುಖ್ಯಮಂತ್ರಿಗಳಾಗಿ ಅವರ ಘನತೆ, ಗೌರವಕ್ಕೆ ಶೋಭೆ ತರುವ ವಿಚಾರವಲ್ಲ ಇದು ಎಂದು ಹೇಳಿದ್ದಾರೆ.

ಆರ್ ಎಸ್ ಎಸ್ ಬಗ್ಗೆ ಮಾತನಾಡಿದರೆ ಅವರಿಗೇನು ಗೌರವ ಬರುವುದಿಲ್ಲ, ಪಶ್ಚಾತ್ತಾಪ ಪಡಬೇಕಾಗುತ್ತದೆ. ಆರ್ ಎಸ್ ಎಸ್ ಬಗ್ಗೆ ಮಾತನಾಡಿದರೆ ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಬಹುದು ಎಂಬ ಭ್ರಮೆಯಲ್ಲಿದ್ದಾರೆ. ಅದರಿಂದ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ ಎಂದರು.

ತಮ್ಮ ಆಪ್ತರ ಮೇಲೆ ಐಟಿ ದಾಳಿ ನಡೆದಿದ್ದು, ಪಕ್ಷದಲ್ಲಿ ತಮ್ಮನ್ನು ಮೂಲೆಗುಂಪು ಮಾಡಲು, ಕಟ್ಟಿಹಾಕಲು ನಡೆಸುತ್ತಿರುವ ಯತ್ನ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಐಟಿ ದಾಳಿ ಎಲ್ಲಿ ನಡೆದಿದೆ, ಇದರಲ್ಲಿ ಏನೂ ಸತ್ಯಾಂಶವಿಲ್ಲ. ಉಮೇಶ್ ಅವರ ಮನೆಯ ಮೇಲೆ ಆದ ತಕ್ಷಣ ಏನಾದರೂ ಪುರಾವೆಗಳು ಸಿಕ್ಕಿವೆಯೇ, ಸಾಬೀತಾಗಿವೆಯೇ ಈ ಆರೋಪದಲ್ಲಿ ಹುರುಳಿಲ್ಲ ಎಂದರು.

ಭಾರತೀಯ ಜನತಾ ಪಾರ್ಟಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮುನ್ನಡೆಯುತ್ತಿದೆ, ಮುಂದಿನ ಬಾರಿ ಕೂಡ ಅವರೇ ಪ್ರಧಾನಿಯಾಗಬೇಕೆಂಬುದು ನಮ್ಮ ಅಪೇಕ್ಷೆ. ಲೋಕಸಭೆಯಲ್ಲಿ ಇನ್ನೂ ಹೆಚ್ಚಿನ ಸ್ಥಾನ ಗೆಲ್ಲಬೇಕು, ಗ್ರಾಮ ಪಂಚಾಯತ್ ನಿಂದ ಹಿಡಿದು ಮುಂದಿನ ಎಲ್ಲ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಗೆಲ್ಲುವುದಕ್ಕೆ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್