ಮಾಜಿ ಸಿಎಂ ಸಿದ್ದರಾಮಯ್ಯ 
ರಾಜಕೀಯ

ಜೆಡಿಎಸ್ ಜಾತ್ಯತೀತ ಪಕ್ಷವಲ್ಲ, ಕೋಮುವಾದಿ ಪಕ್ಷ: ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯದ ಎರಡು ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣಾ ಸಮರದಲ್ಲಿ ಜೆಡಿ(ಎಸ್) ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ...

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣಾ ಸಮರದಲ್ಲಿ ಜೆಡಿ(ಎಸ್) ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನೇತೃತ್ವದ ಪಕ್ಷ ಜಾತ್ಯತೀತ ಪಕ್ಷ ಅಲ್ಲ. ಅದು ಕೋಮುವಾದಿ ಪಕ್ಷ ಎಂದು ಗುರುವಾರ ಆರೋಪಿಸಿದ್ದಾರೆ.

"ಜೆಡಿ(ಎಸ್) ಹಿಂದೆ ಬಿಜೆಪಿ ಜೊತೆ ಸರ್ಕಾರವನ್ನು ರಚಿಸಿತ್ತು(2006 ರಲ್ಲಿ), ಅವರು ಮೈಸೂರು ಕಾರ್ಪೋರೇಶನ್ ನಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಜೆಡಿ(ಎಸ್) ಯಾವ ಬಲವಾದ ಸಿದ್ಧಾಂತವನ್ನು ಹೊಂದಿದೆ? ಅವರು ಮುಸ್ಲಿಂ ಮತಗಳಿಗಾಗಿ ಯಾವತ್ತೂ ಅಲ್ಪಸಂಖ್ಯಾತರನ್ನು ಸಮಾಧಾನಪಡಿಸಲು ಪ್ರಯತ್ನಿಸಬಹುದು. ಆದರೆ ಮತದಾರರು ಬುದ್ಧಿವಂತರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜೆಡಿ(ಎಸ್) ಬಿಜೆಪಿಯ ನಡುವೆ "ಒಳ ಒಪ್ಪಂದ" ಇದೆ. ಅದಕ್ಕಾಗಿಯೇ ಅವರು ಉಪ ಚುನಾವಣೆಗೆ ಎದುರಿಸುತ್ತಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ. 

"ಬಿಜೆಪಿಯೊಂದಿಗೆ ಸರ್ಕಾರ ರಚಿಸಿದರೂ ಜೆಡಿ(ಎಸ್) ಜಾತ್ಯತೀತವಾಗುತ್ತದೆಯೇ?... ನಾನು ಜೆಡಿ(ಎಸ್) ಜಾತ್ಯತೀತ ಪಕ್ಷವಲ್ಲ. ಅದು ಪ್ರಾದೇಶಿಕ ಪಕ್ಷ, ಆದರೆ ಜಾತ್ಯತೀತವಲ್ಲ ಎಂದು ಹೇಳಬಹುದು. ಅವರ ಪಕ್ಷದ ಹೆಸರಲ್ಲಿ ಮಾತ್ರ ಜಾತ್ಯತೀತತೆ ಇದೆ. ಆದರೆ ನಡವಳಿಕೆಯಲ್ಲಿ ಅವರು ಜಾತ್ಯತೀತರಲ್ಲ, ಅವರು ಕೋಮುವಾದಿಗಳು”ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿದ ಜೆಡಿ(ಎಸ್) ನಾಯಕ ಎಚ್ ಡಿ ಕುಮಾರಸ್ವಾಮಿ, ತಮ್ಮ ಪಕ್ಷಕ್ಕೆ ಸಿದ್ದರಾಮಯ್ಯನವರು ಜಾತ್ಯತೀತ ಎಂದು ಯಾವುದೇ ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ. ಏಕೆಂದರೆ ಅವರು ತಮ್ಮ ಬೇರುಗಳನ್ನು ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT