ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ: ಸಿದ್ದರಾಮಯ್ಯ 

ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ, ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಮತ ಹಾಕಲಿದ್ದಾರೆ. ಹಾಗಾಗಿ ಗೆಲುವು ನಮ್ಮದೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೊರಬ: ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ, ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಮತ ಹಾಕಲಿದ್ದಾರೆ. ಹಾಗಾಗಿ ಗೆಲುವು ನಮ್ಮದೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಇಂದು ಬೆಳಗ್ಗೆ ಮಾತನಾಡಿದ ಅವರು, ಬಿಜೆಪಿ ಸತತವಾಗಿ ಜನಪರ ಕೆಲಸಗಳಲ್ಲಿ ವಿಫಲವಾಗುತ್ತಾ ಬಂದಿದೆ. ಅದು ಕೇಂದ್ರದ ಮೋದಿ ಸರ್ಕಾರವಾಗಲಿ, ಇಲ್ಲಿ ರಾಜ್ಯದಲ್ಲಾಗಲಿ ಬೆಲೆ ಏರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಸತತ ವೈಫಲ್ಯ ಕಾಣುತ್ತಾ ಬಂದಿದೆ. ಮೋದಿಯವರು ಸುಳ್ಳಿನ ಮೂಲಕ ಜನರಲ್ಲಿ ಭ್ರಮೆಯನ್ನು ಸೃಷ್ಟಿಸಿದ್ದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಜನರಿಗೆ ಬಿಜೆಪಿಯ ನಿಜರೂಪ ಗೊತ್ತಾಗುತ್ತಿದೆ ಎಂದು ಟೀಕಿಸಿದರು.

ನಮ್ಮ ಸರ್ಕಾರವಿದ್ದಾಗ ಜಾರಿಗೆ ತಂದಿದ್ದ ಕಾರ್ಯಕ್ರಮಗಳ ಬಗ್ಗೆ ಜನ ಈಗಲೂ ಮಾತನಾಡುತ್ತಿದ್ದಾರೆ, ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಜನ ನೆನಪು ಮಾಡಿಕೊಳ್ಳುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ನಮ್ಮ ಪಕ್ಷಕ್ಕೆ ವರವಾಗಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೈಗೆ ಗೆಲುವು ಖಚಿತ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?