ಡಿಕೆ.ಶಿವಕುಮಾರ್ 
ರಾಜಕೀಯ

ಉಪಚುನಾವಣೆಯ ಬಿಜೆಪಿ ಪ್ರಣಾಳಿಕೆ ಅರ್ಥಹೀನವಾದದ್ದು: ಡಿಕೆ.ಶಿವಕುಮಾರ್

ಹಾನಗಲ್ ಉಪಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಅರ್ಥಹೀನವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.

ಹಾನಗಲ್: ಹಾನಗಲ್ ಉಪಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಅರ್ಥಹೀನವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.

ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ವಿ ಮಾನೆ ಪರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಪ್ರಣಾಳಿಕೆಯೇ ಅರ್ಥಹೀನವಾದದ್ದು. ಪ್ರಣಾಳಿಕೆಯಲ್ಲಿ ಮೂರ್ಖತನದ ವಿಚಾರಗಳೇ ಇವೆ.  ಕ್ಷೇತ್ರದ ನಿವಾಸಿಗಳಿಗೆ ಮೂಲಭೂತ ಅಗತ್ಯಗಳನ್ನು ಒದಗಿಸುವಲ್ಲಿ ಡಬಲ್ ಎಂಜಿನ್ ಸರ್ಕಾರ ಇದುವರೆಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ಬಳಿಕ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನರು ಸಾಮಾನ್ಯ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ ಮತ್ತು ಬೆಲೆಗಳನ್ನು ನಿಯಂತ್ರಣಕ್ಕೆ ತರಲು ಸರ್ಕಾರಗಳು ವಿಫಲವಾಗಿವೆ ಎಂದು ತಿಳಿಸಿದ್ದಾರೆ.

ಈ ಬಾರಿ ಬಿಜೆಪಿಗೆ ಜನರು ಪಾಠ ಕಲಿಸುತ್ತಾರೆ, ಬಿಜೆಪಿ ಸಚಿವರು ಮತ್ತು ಸಿಎಂಗಳು ವಿಧಾನಸೌಧಕ್ಕೆ ಬೀಗ ಹಾಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಹಾನಗಲ್ ಹಾಗೂ ಸಿಂಗದಿಯಲ್ಲಿ ಬೀಡುಬಿಟ್ಟಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಮಹಿಳೆಯರ ಸುರಕ್ಷತೆಯು ಕಾಳಜಿಯ ವಿಷಯವಾಗಿದೆ. “ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿ ಮಹಿಳೆಯರು ಏಕಾಂಗಿಯಾಗಿ ಪೊಲೀಸ್ ಠಾಣೆಗೆ ಹೋಗುವಂತಿಲ್ಲ. ಕರ್ನಾಟಕದಲ್ಲಿ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ಸರ್ಕಾರ ಮತ್ತು ಅದರ ನಾಯಕರು ದೇಶದ ಮಹಿಳೆಯರು ಮತ್ತು ರೈತರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT