ಕುಮಾರಸ್ವಾಮಿ 
ರಾಜಕೀಯ

ಜೆಡಿಎಸ್ ಶಾಸಕ ಮಂಜುನಾಥ್‌ ಬಂಧನ: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋಗಿದ್ದ ಜೆಡಿಎಸ್ ಶಾಸಕ ಮಂಜುನಾಥ್‌ ಅವರನ್ನು ಬಂಧಿಸಿರುವುದನ್ನು...

ಹಾಸನ: ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋಗಿದ್ದ ಜೆಡಿಎಸ್ ಶಾಸಕ ಮಂಜುನಾಥ್‌ ಅವರನ್ನು ಬಂಧಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಡಾವಣೆಯ ಜನರ ಸಂಕಷ್ಟಕ್ಕೆ ಸಂಬಂಧಿಸಿ ಹೋರಾಟಗಾರರು, ಸ್ಥಳೀಯ ನಿವಾಸಿಗಳನ್ನು ಒಳಗೊಂಡಂತೆ ಒಂದು ಸಭೆ ಕರೆದು ಪರಿಹಾರ ಬದಲಿಗೆ ಏಕಾಎಕಿ ಮನೆಗಳನ್ನು ನೆಲಸ ಮಾಡಿ ಕಟುಕರ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನ ಸಾಲ ಮಾಡಿ ಮನೆಗಳನ್ನು ಕಟ್ಟಿದ್ದಾರೆ. ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೇ, ಸಮರ್ಪಕ ಮಾಹಿತಿಯನ್ನೂ ನೀಡದೇ ಅಧಿಕಾರಿಗಳು ಮತ್ತು ಸರಕಾರ ಅಮಾಯಕರ ಜೀವನದ ಜತೆ ಚೆಲ್ಲಾಟ ಆಡಿದ್ದಾರೆ. ಬಿಡಿಎಯ ಈಗಿನ ಅಧ್ಯಕ್ಷ ಎಸ್.‌ಆರ್.‌ವಿಶ್ವನಾಥ್‌ ಅವರೇ ಹಿಂದೆ ಜನರ ಜನರ ಪರ ಹೋರಾಟ ಮಾಡಿ, ಈಗ ನೋಡಿದರೆ ಅವರೇ ನಿಂತು ಮನೆಗಳನ್ನು ನೆಲಸಮ ಮಾಡಿಸುತ್ತಿದ್ದಾರೆ ಎಂದು ಹೆಚ್‌ಡಿಕೆ ಆಕ್ರೋಶ ಹೊರಹಾಕಿದರು.

ಇವರೇ ಒಂದು ಕಡೆ ದುಡ್ಡು ಹೊಡೆಯುವುದು ಇನ್ನೊಂದು ಕಡೆ ಇವರೇ ಮನೆಗಳನ್ನು ಒಡೆಸಿ ಈಗ ಜನರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಮುಖ್ಯಮಂತ್ರಿಗೆ ಜವಾಬ್ದಾರಿ ಎನ್ನುವುದು ಇದ್ದಿದ್ದರೆ ಪರಸ್ಪರ ಕುಳಿತು ಚರ್ಚೆ ಮಾಡಿ, ಕಾನೂನು ರೀತಿಯಲ್ಲಿ ಜನರಿಗೆ ರಕ್ಷಣೆ ನೀಡಬೇಕಾಗಿತ್ತು ಎಂದರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT