ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ಡಿಕೆಶಿ ಕಾಸು - ಸಿದ್ದರಾಮಯ್ಯ ಬಾಸು: ಅಸಹಾಯಕ ಡಿಕೆಶಿ ಮುಖ್ಯಮಂತ್ರಿ‌ ಕನಸಿಗೆ ಎಳ್ಳು ನೀರು!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ‌ ಕನಸಿಗೆ ಎಳ್ಳು ನೀರು ಬಿಡಲು ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ‌ ಕನಸಿಗೆ ಎಳ್ಳು ನೀರು ಬಿಡಲು ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿಕೆಶಿ ಕಾಸು - ಸಿದ್ದರಾಮಯ್ಯ ಬಾಸು’ ಎಂಬಂತಾಗಿದೆ ಕರ್ನಾಟಕ ಕಾಂಗ್ರೆಸ್ ಸ್ಥಿತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನೇನು ಮಾಡುತ್ತೇವೆ ಎಂದು ಆಶ್ವಾಸನೆ ನೀಡುತ್ತಲೇ ಸಾಗುತ್ತಿರುವ ಸಿದ್ದರಾಮಯ್ಯ ಪರೋಕ್ಷವಾಗಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಡಿಕೆಶಿಯವರದ್ದು ಬರೇ ಕನಸೇ’ ಎಂದು ಪ್ರಶ್ನಿಸಿದೆ.

‘ಡಿಕೆಶಿ ಅವರೇ, ಸಿದ್ದರಾಮಯ್ಯ ಮತ್ತೆ ತಮ್ಮ ವರಸೆ ಶುರು ಮಾಡಿದ್ದಾರೆ. ನೀವು ಎಷ್ಟೇ ತಂತ್ರಗಾರಿಕೆ ನಡೆಸಿದರೂ ಪ್ರಯೋಜನವಿಲ್ಲ. ನಿಮ್ಮ ಮುಖ್ಯಮಂತ್ರಿ‌ ಕನಸಿಗೆ ಎಳ್ಳು ನೀರು ಬಿಡಲು ಅವರು ಸಿದ್ದರಾಗಿದ್ದಾರೆ. ನಿಮ್ಮದೀಗ ‘ಬಗಲ್ ಮೇ ದುಷ್ಮನ್’ ಪರಿಸ್ಥಿತಿ!’ ಅಸಹಾಯಕ ಡಿಕೆಶಿ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಬಿಜೆಪಿ ಟ್ವೀಟ್ ಮಾಡಿದೆ.

‘ಅಲ್ಪಸಂಖ್ಯಾತರಿಗೆ 3 ಸಾವಿರ ಕೋಟಿ ರು. ಕಸೂತಿಗೆ 100 ಕೋಟಿ. ಅದಕ್ಕಿಷ್ಟು, ಇದಕ್ಕಿಷ್ಟು, ಸಂಪುಟದಲ್ಲಿ ಇಂತಿಂಥವರೇ ಇರುತ್ತಾರೆ... ಈ ರೀತಿ ಸಿದ್ದರಾಮಯ್ಯ ಸ್ವಯಂ ಘೋಷಣೆ ಮಾಡುತ್ತಲೇ ಇದ್ದಾರೆ. ಅಂದರೆ ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಹಾಗಾದರೆ ನಿಮ್ಮ ಕತೆಯೇನು ಡಿಕೆಶಿ’ ಎಂದು ಬಿಜೆಪಿ ಪ್ರಶ್ನಿಸಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನೇನು ಮಾಡುತ್ತೇವೆ ಎಂದು ಆಶ್ವಾಸನೆ ನೀಡುತ್ತಲೇ ಸಾಗುತ್ತಿರುವ ಸಿದ್ದರಾಮಯ್ಯ ಪರೋಕ್ಷವಾಗಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಮತ್ತೆ ತಮ್ಮ ವರಸೆ ಶುರು ಮಾಡಿದ್ದಾರೆ. ನೀವು ಎಷ್ಟೇ ತಂತ್ರಗಾರಿಕೆ ನಡೆಸಿದರೂ ಪ್ರಯೋಜನವಿಲ್ಲ. ನಿಮ್ಮ ಮುಖ್ಯಮಂತ್ರಿ‌ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ  ಸಿದ್ದರಾಗಿದ್ದಾರೆ. ನಿಮ್ಮದೀಗ "ಬಗಲ್ ಮೆ ದುಷ್ಮನ್" ಪರಿಸ್ಥಿತಿಯಂತಾಗಿದೆ ಎಂದು ವ್ಯಂಗ್ಯವಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT