ಜಮೀರ್ ಅಹ್ಮದ್ ಖಾನ್ 
ರಾಜಕೀಯ

'ಸಮ್ಮಿಶ್ರ ಸರ್ಕಾರ ಕೆಡವಲು ಅವರಿಗೂ ಇಷ್ಟವಿತ್ತು: ಜೆಡಿಎಸ್ ತೊರೆದು ಬಿಜೆಪಿ ಸೇರಲು ಜಮೀರ್ ಸಲಹೆ ನೀಡಿದರು'

ನಾನು ಮತ್ತು ಶಾಸಕ ಜಮೀರ್ ಅಹಮ್ಮದ್ ಖಾನ್‌ ಒಳ್ಳೆ ಸ್ನೇಹಿತರು. 'ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಏನೂ ಕೆಲಸ ಆಗುತ್ತಿಲ್ಲ.,ನೀವು ಬಿಜೆಪಿಗೆ ಹೋಗಿ' ಎಂದು ಹೇಳಿದ್ದೇ ಜಮೀರ್.

ಹಾಸನ: ನಾನು ಮತ್ತು ಶಾಸಕ ಜಮೀರ್ ಅಹಮ್ಮದ್ ಖಾನ್‌ ಒಳ್ಳೆ ಸ್ನೇಹಿತರು. 'ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಏನೂ ಕೆಲಸ ಆಗುತ್ತಿಲ್ಲ.,ನೀವು ಬಿಜೆಪಿಗೆ ಹೋಗಿ' ಎಂದು ಹೇಳಿದ್ದೇ ಜಮೀರ್. ಅದರಲ್ಲಿ ಸುಳ್ಳೇನು ಇಲ್ಲ ಎಂದು ಅಬಕಾರಿ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಕೆಲಸಗಳು ಸರಿಯಾಗಿ ಆಗುತ್ತಿರಲಿಲ್ಲ. ಹಾಗಾಗಿ ಸರ್ಕಾರ ಕೆಡವಲು ಜಮೀರ್‌ಗೂ ಇಷ್ಟವಿತ್ತು. ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಹೇಳಿ ನನ್ನನ್ನು ಬಿಜೆಪಿಗೆ ಹೋಗುವಂತೆ ಹೇಳಿದರು. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಯಾರೇ ಬಂದರೂ ಅವರನ್ನು ಸೇರಿಸಿಕೊಳ್ಳುವ ಬಗ್ಗೆ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ’ ಎಂದು  ತಿಳಿಸಿದರು.

‘ಯಾವುದೇ ವಿಚಾರವಾಗಿ ರಾಜಕೀಯ ನಾಯಕರು ಎಚ್ಚರಿಕೆಯಿಂದ ಮಾತನಾಡಬೇಕು. ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿದಂತೆ ನಾಯಕರ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ರಾಜ್ಯದ ಜನ ಗಮನಿಸುತ್ತಿರುತ್ತಾರೆ. ಈ ವಿಚಾರದಲ್ಲಿ ಜಮೀರ್‌ ಅವರ ಪದ ಬಳಕೆಯನ್ನು ಖಂಡಿಸುತ್ತೇನೆ’ ಎಂದರು.

‘ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ನೀಡಲಾಗಿದೆ. ಕ್ಷೇತ್ರದ ಜನರಿಗೆ ಒಳ್ಳೆಯ ಕೆಲಸ ಮಾಡಿದ್ದೇನೆ. ಮುಂದೆಯೂ ಪಕ್ಷ ಟಿಕೆಟ್‌ ನೀಡಲಿದೆ. ಎಲ್ಲವೂ ಸಿಕ್ಕಿದೆ. ಬೇರೆ ಪಕ್ಷಕ್ಕೆ ಹೋಗಿ ಏನು ಮಾಡಲಿ? ನಾನು ಬಿಜೆಪಿಯಲ್ಲೇ ಇರುತ್ತೇನೆ ಮತ್ತು ನನ್ನ ಮಕ್ಕಳಿಗೂ ಹೇಳುತ್ತೇನೆ. ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ. ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel