ಗುದ್ದಲಿ ಪೂಜೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ 
ರಾಜಕೀಯ

ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸುಮಲತಾ; ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇನೆ ಎಂದ ಸಂಸದೆ

ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ಗೆದ್ದು ಬಂದರೆ ಮಂಡ್ಯದಲ್ಲಿ ಮನೆ ನಿರ್ಮಿಸಿ ಅಲ್ಲಿ ವಾಸವಿರುವುದಾಗಿ, ಜನರ ಕಷ್ಟ-ಸುಖಗಳಿಗೆ ಹತ್ತಿರದಿಂದ ಸ್ಪಂದಿಸುವುದಾಗಿ ಕ್ಷೇತ್ರದ ಮತದಾರರಿಗೆ ಭರವಸೆ ನೀಡಿದ್ದರು.

ಮಂಡ್ಯ: ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ಗೆದ್ದು ಬಂದರೆ ಮಂಡ್ಯದಲ್ಲಿ ಮನೆ ನಿರ್ಮಿಸಿ ಅಲ್ಲಿ ವಾಸವಿರುವುದಾಗಿ, ಜನರ ಕಷ್ಟ-ಸುಖಗಳಿಗೆ ಹತ್ತಿರದಿಂದ ಸ್ಪಂದಿಸುವುದಾಗಿ ಕ್ಷೇತ್ರದ ಮತದಾರರಿಗೆ ಭರವಸೆ ನೀಡಿದ್ದರು.

ಅದರಂತೆ ಇಂದು ಸೆಪ್ಟೆಂಬರ್ 1 ಬುಧವಾರ ಮಂಡ್ಯ ಜಿಲ್ಲೆಯ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲೇ ಹನಕೆರೆ ಗ್ರಾಮದ 28 ಗುಂಟೆ ತಮ್ಮ ಜಮೀನಿನಲ್ಲಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಪುತ್ರ ಅಭಿಷೇಕ್ ಗೌಡ, ಆಪ್ತರು, ಹಿತೈಷಿಗಳು ಉಪಸ್ಥಿತರಿದ್ದರು.

ಇಂದು ಬೆಳಗ್ಗೆ ನಡೆದ ಧಾರ್ಮಿಕ ಗುದ್ದಲಿ ಪೂಜಾ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ತಮ್ಮ ಮಗನ ಜೊತೆ ಸುಮಲತಾ ನೆರವೇರಿಸಿದರು.ಈ ಮೂಲಕ ಜಿಲ್ಲೆಯ ರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಸುಮಲತಾ ಭದ್ರವಾಗಿ ನೆಲೆಯೂರಲು ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.

ಗುದ್ದಲಿಪೂಜೆ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಜನತೆಗೆ ವಾಗ್ದಾನ ನೀಡಿದ್ದೆ. ಅವುಗಳಲ್ಲಿ ಒಂದೊಂದನ್ನೇ ನಿಭಾಯಿಸಿಕೊಂಡು ಬರುತ್ತಿದ್ದೇನೆ. ಮನೆ ನಿರ್ಮಿಸುವುದು ಕೂಡ ಅವುಗಳಲ್ಲಿ ಒಂದು. ಇಲ್ಲಿ ಮನೆ ನಿರ್ಮಿಸಿ ಜನತೆಗೆ ಹತ್ತಿರವಾಗಬೇಕೆಂದು ನನ್ನ ಉದ್ದೇಶ ಎಂದರು.

ಕಳೆದೆರಡು ವರ್ಷಗಳಿಂದ ಮಂಡ್ಯದಲ್ಲಿ ಮನೆ ನಿರ್ಮಿಸಲು ಜಾಗ ಹುಡುಕಾಡುತ್ತಿದ್ದೆ. ಮಂಡ್ಯ-ಮದ್ದೂರು ಹೆದ್ದಾರಿಯಲ್ಲಿ ಉತ್ತಮ ಪ್ರಶಸ್ತ ಜಾಗ ಸಿಕ್ಕಿತು. ಸಂತೋಷವಾಗಿದೆ, ಆದಷ್ಟು ಶೀಘ್ರ ಮನೆ ನಿರ್ಮಾಣ ಮಾಡಿ ಜನತೆಗೆ ಬಂದು ಹೋಗಲು, ನನಗೂ ಇಲ್ಲಿ ಕೆಲಸ ಮಾಡಲು ಸಹಾಯವಾಗಬೇಕೆಂದು ನನ್ನ ಆಶಯ ಎಂದರು.

ಅಂಬರೀಷ್ ಅವರು ನಿಧನರಾದಾಗ ಮಂಡ್ಯಕ್ಕೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಬಂದು ಇಲ್ಲಿನ ತಿಲಕ ಹಚ್ಚಿ ಕಳುಹಿಸಿಕೊಟ್ಟಿದ್ದೆವು. ಅದೇ ಮಂಡ್ಯದ ಮಣ್ಣಿನಲ್ಲಿ ಮನೆ ನಿರ್ಮಿಸಬೇಕೆಂಬುದು ನನ್ನ ಮತ್ತು ಮಗ ಅಭಿಷೇಕ್ ನ ಬಯಕೆ, ಅದರಂತೆ ಮನೆ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದರು.

ಪ್ರತಿಯೊಂದಕ್ಕೂ ರಾಜಕೀಯ ಲೇಪ ಹಚ್ಚಿದರೆ ನಾನು ಏನೂ ಮಾಡಲು ಆಗುವುದಿಲ್ಲ, ರಾಜಕೀಯ ದೃಷ್ಟಿಕೋನದಿಂದ ನೋಡುವವರು ನೋಡುತ್ತಾರೆ, ತಪ್ಪೇನಿಲ್ಲ, ನೋಡಿಕೊಳ್ಳಲಿ, ನನ್ನ ಉದ್ದೇಶ ಸ್ಪಷ್ಟವಾಗಿದೆ ಎಂದರು.

ಮಗ ಅಭಿಷೇಕ್ ರಾಜಕೀಯ ಪ್ರವೇಶಿಸುತ್ತಾರೆಯೇ ಎಂದು ಕೇಳಿದ್ದಕ್ಕೆ, ಅದು ಅವನಲ್ಲಿಯೇ ಕೇಳಿ, ನಾನು ಸಂಸದೆಯಾಗುವ ಮೊದಲು ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಅಂದುಕೊಂಡಿರಲಿಲ್ಲ ಎಂದಷ್ಟೇ ಹೇಳಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT