ಸಿದ್ದರಾಮಯ್ಯ 
ರಾಜಕೀಯ

ದೇಶದ ಕೆಲವೇ ಉದ್ದಿಮೆದಾರರಿಗೆ ಮಾತ್ರ ಅಚ್ಚೇದಿನ್: ಸಿದ್ದರಾಮಯ್ಯ

ದೇಶವನ್ನು ಸ್ವರ್ಗ ಮಾಡುವ ಭ್ರಮೆ ಹುಟ್ಟಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಮತ್ತು ಮೋದಿ ಸರ್ಕಾರ ರೈತರಿಗೆ, ಯುವಕರಿಗೆ ಮಂಕು ಬೂದಿ ಎರಚಿ, ದಾರಿ ತಪ್ಪಿಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ..

ಬೆಂಗಳೂರು: ದೇಶವನ್ನು ಸ್ವರ್ಗ ಮಾಡುವ ಭ್ರಮೆ ಹುಟ್ಟಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಮತ್ತು ಮೋದಿ ಸರ್ಕಾರ ರೈತರಿಗೆ, ಯುವಕರಿಗೆ ಮಂಕು ಬೂದಿ ಎರಚಿ, ದಾರಿ ತಪ್ಪಿಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ತೀವ್ರವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಪ್ರಧಾನಿಯಾಗಿ 7 ವರ್ಷ ಕಳೆದಿದ್ದರು. ಜನರಿಗೆ ಅಚ್ಚೇ ದಿನ್ ಬರಲಿಲ್ಲ, ಬದಲಾಗಿ ಬೆಲೆ ಏರಿಕೆಯಿಂದ ಜನಸಾಮಾನ್ಯರ ಪಾಲಿಗೆ ಬಹಳ ಕೆಟ್ಟ ದಿನಗಳು ಬಂದಿವೆ. ಆದರೆ ದೇಶದ ಕೆಲವೇ ಕೆಲವು ಉದ್ದಿಮೆದಾರರಿಗೆ ಅಚ್ಚೇದಿನ್ ಬಂದಿದೆ ಎಂದು ಮೂದಲಿಸಿದರು.

ದೇಶವನ್ನು ಅಭಿವೃದ್ಧಿ ಮಾಡುವ ನೆಪದಲ್ಲಿ ಮೋದಿ ಸರಕಾರ ಆಸ್ತಿಗಳನ್ನು ಖಾಸಗಿಯವರಿಗೆ ಮನಬಂದಂತೆ ಮಾರಾಟ ಮಾಡಲು ಮುಂದಾಗಿದೆ ಎಂದು ಸಿದ್ದರಾಮಯ್ಯ ತೀವ್ರ ಅಸಮಾಧಾನ ಹೊರಹಾಕಿದರು.

ಅಚ್ಚೇ ದಿನ್ ಬರುತ್ತೆ ಎಂದು ಜನರಲ್ಲಿ ಆಶಾ ಗೋಪುರ ಕಟ್ಟಿ ದೇಶ ಭಕ್ತಿ, ರಾಷ್ಟ್ರ ಭಕ್ತಿಯ ಹೆಸರಿನಲ್ಲಿ ದಾರಿ ತಪ್ಪಿಸಿದರು. ಬಿಜೆಪಿ ಎಂದೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. ಅವರಿಗೆ ದೇಶ ಭಕ್ತಿ ಕೊರತೆ ಇದೆ ಎಂದರು.

ಇನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ 224 ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಆದರೆ ನಾನು ಯಾರಿಗೂ ಪಕ್ಷಕ್ಕೆ ಆಹ್ವಾನ ನೀಡಿಲ್ಲ. ಜಿಟಿ ದೇವೇಗೌಡ ಮಾತ್ರ ಸಂಪರ್ಕ ಮಾಡಿ ಮಾತುಕತೆ ಮಾಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT