ಹೆಚ್ ಡಿ ದೇವೇಗೌಡ 
ರಾಜಕೀಯ

ಕಾರ್ಯಕರ್ತರೇ ಜೆಡಿಎಸ್ ಪಕ್ಷದ ಜೀವಾಳ; ನಾಯಕರು ನೆಪಮಾತ್ರ: ಹೆಚ್ ಡಿ ದೇವೇಗೌಡ

ನಿಷ್ಠಾವಂತ ಕಾರ್ಯಕರ್ತರಿಂದಲೇ ಜೆಡಿಎಸ್ ಪಕ್ಷ ಉಳಿದಿದೆಯೆಂದು ಎಂದು ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ನಿಷ್ಠಾವಂತ ಕಾರ್ಯಕರ್ತರಿಂದಲೇ ಜೆಡಿಎಸ್ ಪಕ್ಷ ಉಳಿದಿದೆಯೆಂದು ಎಂದು ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿಂದು ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ವೇದಿಕೆ ಮೇಲಿರುವ ಮಹಿಳಾ ಮುಖಂಡರು ದೇವೇಗೌಡರ ಮುಖ ನೋಡಿ ಪಕ್ಷಕ್ಕೆ ಬಂದಿಲ್ಲ. ಪಕ್ಷದ ತತ್ವ ಸಿದ್ಧಾಂತ ಮತ್ತು ಜನಪರ ಪರ ಕಾಳಜಿಮೆಚ್ಚಿ ಬಂದಿದ್ದಾರೆ. ಕಾರ್ಯಕರ್ತರೇ ಪಕ್ಷದ ಜೀವಾಳ, ನಾಯಕರು ನೆಪಮಾತ್ರ ಎಂದು ದೇವೇಗೌಡರು ಹೇಳಿದರು.

ಹೇಗೆ ಪಕ್ಷವನ್ನು ಹೇಗೆ ಸಂಘಟಿಸಬೇಕು ಎಂದು ಎಲ್ಲರಿಗೂ ಸ್ಪಷ್ಟವಾಗಿ ಸೂಚನೆ ಕೊಡಲಾಗಿದೆ. ರಾಜಕೀಯವಾಗಿ ನಮ್ಮ ಶಕ್ತಿ ಪ್ರದರ್ಶನ ಮಾಡಲು ಮಹಿಳೆಯರು ಆಗಮಿಸಿದ್ದೀರಿ. ನಾನು ಸಿಎಂ ಆಗುವುದಕ್ಕೆ ಮೊದಲೇ ಹೆಣ್ಣು ಮಕ್ಕಳಿಗೆ ಏನೂ ಮಾಡಬೇಕು ಎಂದು ಚಿಂತನೆ ಮಾಡಿ ಮೀಸಲಾತಿಗಾಗಿ ಹೋರಾಟ ಮಾಡಿದ್ದನ್ನು ಮೆಲಕು ಹಾಕಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಮುಳುಗುತ್ತಿರುವ ಹಡಗಿನ ಪಕ್ಷದ ಜೊತೆ ಎರಡು ಬಾರಿ ಸರ್ಕಾರ ರಚನೆ ಮಾಡಿದ್ದನ್ನು ಅವರು ಮರೆತಿರಬಹುದು ಎಂದು ತಿರುಗೇಟು ನೀಡಿದರು.

ಮುಂದಿನ ಚುನಾವಣೆಯಲ್ಲಿ ಅವರಿಗೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ. ಕುಮಾರಸ್ವಾಮಿ ಸವಾಲು ಹಾಕಿದರು. ಆದರೆ ಜೆಡಿಎಸ್ ಮಹಿಳಾ ಸಮಾವೇಶಕ್ಕೆ ಜೆಡಿಎಸ್ ಏಕೈಕ ಮಹಿಳಾ ಶಾಸಕಿ ಅನಿತಾ ಕುಮಾರಸ್ವಾಮಿ ಮಾತ್ರ ಗೈರು ಹಾಜರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT