ಕೆ.ಎಸ್.ಈಶ್ವರಪ್ಪ 
ರಾಜಕೀಯ

ಸಾಮೂಹಿಕ ನಾಯಕತ್ವದಲ್ಲೇ ಬಿಜೆಪಿ 2023ರ ಚುನಾವಣೆ ಎದುರಿಸಲಿದೆ: ಕೆ.ಎಸ್.ಈಶ್ವರಪ್ಪ

ಅಮಿತ್ ಶಾ ಅವರ ಒಂದು ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎನ್ನುವ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ರಾಜ್ಯ ಬಿಜೆಪಿಯಲ್ಲಿ ಆಕ್ಷೇಪದ ಕೂಗು ಎದ್ದಿದೆ. ಈ ಆಕ್ಷೇಪದ ಕೂಗಿಗೆ ಇದೀಗ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ದನಿಗೂಡಿಸಿದ್ದಾರೆ. 

ಶಿವಮೊಗ್ಗ: ಅಮಿತ್ ಶಾ ಅವರ ಒಂದು ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎನ್ನುವ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ರಾಜ್ಯ ಬಿಜೆಪಿಯಲ್ಲಿ ಆಕ್ಷೇಪದ ಕೂಗು ಎದ್ದಿದೆ. ಈ ಆಕ್ಷೇಪದ ಕೂಗಿಗೆ ಇದೀಗ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ದನಿಗೂಡಿಸಿದ್ದಾರೆ. 

ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅಮಿತ್ ಶಾ ಹೇಳಿದ್ದಾರೆ ಹೌದು, ಯಾವ ರೀತಿ ಹೇಳಿದ್ದಾರೆ ಗೊತ್ತಿಲ್ಲ.  ಸಾಮೂಹಿಕ ನಾಯಕತ್ವದ ಬಗ್ಗೆ ಖಂಡಿತಾ ನಮ್ಮೆಲ್ಲರ ಒಲವಿದೆ. ಎಲ್ಲರೂ ಕೂತು ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. 

ಸಾಮೂಹಿಕ ನಾಯಕತ್ವದಲ್ಲಿ ಬೊಮ್ಮಾಯಿಯವರ ಪಾತ್ರವೂ ಇರುತ್ತದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಂಘಟನೆ ಕಟ್ಟುತ್ತಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದೇವೆ. ಏನೇ ಆದರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತದೆ ಎಂದು ತಿಳಿಸಿದ್ದಾರೆ. 

ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿಯಲ್ಲಿ ಚುನಾವಣೆ ನಡೆಯುತ್ತಿದೆ. ನಾನು ಕೂಡ ಆ ಭಾಗಕ್ಕೆ ಹೋಗಿ ಬಂದಿದ್ದೇನೆ. ಅಲ್ಲಿಯ ಜನತೆ ಬಿಜೆಪಿಯ ಜೊತೆಗೆ ಇದ್ದಾರೆ. ಕಾರ್ಯಕರ್ತರು ತುಂಬಾ ಉತ್ಸಾಹದಲ್ಲಿ ಕೆಲಸ ಮಾಡಿದ್ದಾರೆ. ಮೂರು ಮಹಾನಗರ ಪಾಲಿಕೆಯಲ್ಲಿ ಪೂರ್ಣ ಬಹುಮತವನ್ನು ಬಿಜೆಪಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT