ವಿಶ್ವನಾಥ್ 
ರಾಜಕೀಯ

ರಾಷ್ಟ್ರೀಯ ಶಿಕ್ಷಣ ನೀತಿ ಏಕಪಕ್ಷೀಯ ತೀರ್ಮಾನ: ಅಶ್ವತ್ಥನಾರಾಯಣ ವಿರುದ್ಧ ವಿಶ್ವನಾಥ್ ಕಿಡಿ

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಒಳಗೊಳ್ಳದೆ ಏಕಪಕ್ಷೀಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ’ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್‌.ವಿಶ್ವನಾಥ್ ಹೇಳಿದರು. 

ಮೈಸೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಒಳಗೊಳ್ಳದೆ ಏಕಪಕ್ಷೀಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ’ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್‌.ವಿಶ್ವನಾಥ್ ಹೇಳಿದರು. 

ಭಾನುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ’ಬೇರುಗಳನ್ನೇ ಕಡೆಗಣಿಸಿ ಕೊಂಬೆಗಳನ್ನು ಸುಧಾರಿಸಲು ಹೊರಟರೆ ಪ್ರಯೋಜನ ಇಲ್ಲ. ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಶಿಕ್ಷಣ ನೀತಿ ಬಗ್ಗೆ ವಿಸ್ತೃತ ಚರ್ಚೆ ರಾಜ್ಯದೆಲ್ಲೆಡೆ ನಡೆಯಬೇಕಿತ್ತು’ ಎಂದರು. 

ಉನ್ನತ ಶಿಕ್ಷಣ ಸಚಿವರಿಗೆ ಪ್ರಾಥಮಿಕ ಶಿಕ್ಷಣ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸೌಜನ್ಯವಿಲ್ಲ , ಅಶ್ವತ್ಥನಾರಾಯಣ ತರಾತುರಿಯಲ್ಲಿ ನೀತಿಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿದರು.

ಪ್ರಾಥಮಿಕ ಶಿಕ್ಷಣವು ಶಿಕ್ಷಣ ವ್ಯವಸ್ಥೆಯ ಅಡಿಪಾಯವಾಗಿದೆ. ಶಿಕ್ಷಕರ ಅಭಿಪ್ರಾಯಗಳನ್ನು ಕೇಳಬೇಕಿತ್ತು ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಉಂಟಾಗುವ ಅಡೆತಡೆಗಳ ಬಗ್ಗೆ ಚರ್ಚಿಸಬಹುದಿತ್ತು, ”ಎಂದು ಅವರು ಹೇಳಿದರು.

ಎನ್‌ಇಪಿಯ ವಿವರವಾದ ಮಾರ್ಗಸೂಚಿಗಳನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮುದ್ರಿಸಿ ವಿತರಿಸಬೇಕು. ಎನ್ಇಪಿ ಸಂಬಂಧ ಚರ್ಚೆಗಳನ್ನು ರಾಜ್ಯದಾದ್ಯಂತ ನಡೆಸಬೇಕು ಮತ್ತು ಬ್ಲಾಕ್ ಶಿಕ್ಷಣ ಅಧಿಕಾರಿಗಳು ಕಡ್ಡಾಯವಾಗಿ ಈ ಸಂವಾದಗಳನ್ನು ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಶಾಸಕ ತನ್ವೀರ್ ಸೇಠ್, ‘ಉನ್ನತ ಶಿಕ್ಷಣ ಸಚಿವರು ತರಾತುರಿಯಲ್ಲಿ ಶಿಕ್ಷಣ ನೀತಿ ಜಾರಿ ಮಾಡಲು ಹೊರಟಿರುವುದು ಸರಿಯಲ್ಲ. ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾತನ್ನು ಮರೆಯಬಾರದು’ ಎಂದು ಹೇಳಿದರು. ‌

ಕಾಂಗ್ರೆಸ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸುತ್ತಿದೆ ಎಂದು  ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಲಾರ್ಡ್ ಮೆಕಾಲೆ ಅವರ ಶಿಕ್ಷಣ ನೀತಿಯನ್ನು ಕಾಂಗ್ರೆಸ್ ಈಗಲೂ ಅನುಸರಿಸುತ್ತಿದೆ, ದಶಕಗಳ ಕಾಲ ದೇಶವನ್ನು ಆಳುತ್ತಿದ್ದರೂ ಪಕ್ಷವು ಸ್ವಾವಲಂಬಿ ರಾಷ್ಟ್ರವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.  ಕಾಂಗ್ರೆಸ್ ಪಾಶ್ಚಾತ್ಯ ಸಂಸ್ಕೃತಿಯಿಂದ ಪ್ರಭಾವಿತವಾಗಿದೆ ಕಟೀಲ್ ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT