ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿರುವ ಸಿಎಂ ಬೊಮ್ಮಾಯಿ 
ರಾಜಕೀಯ

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಹೊಸ ಕನಸು!

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ದೆಹಲಿ ಬೇಟಿ ಸಿಎಂ ಡೆಲ್ಲಿ ಭೇಟಿಯು ‘ಕಮಲ ಪಾಳಯ’ದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಕನಸು ಚಿಗುರಿಕೊಂಡಿದೆ. 

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ದೆಹಲಿ ಬೇಟಿ ಸಿಎಂ ಡೆಲ್ಲಿ ಭೇಟಿಯು ‘ಕಮಲ ಪಾಳಯ’ದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಕನಸು ಚಿಗುರಿಕೊಂಡಿದೆ. 

ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ನಡುವಲ್ಲೇ ರಾಷ್ಟ್ರ ರಾಜಧಾನಿ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡುವುದರಿಂದ ಉಳಿದ ನಾಲ್ಕು ಸಚಿವ ಸ್ಥಾನಗಳ ಭರ್ತಿ ಕುರಿತು ಹೈಕಮಾಂಡ್ ಜೊತೆಗೆ ಬೊಮ್ಮಾಯಿಯವರು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

2 ದಿನಗಳ ಕಾಲ ದೆಹಲಿಗೆ ಭೇಟಿ ನೀಡಿರುವ ಬೊಮ್ಮಾಯಿಯವರು ಮೊದಲ ದಿನವಾದ ನಿನ್ನೆ ನೇರವಾಗಿ ನಾರ್ತ್ ಬ್ಲಾಕ್ ನಲ್ಲಿರುವ ನಿರ್ಮಲಾ ಸೀತಾರಾಮನ್ ಕಚೇರಿಗೆ ತೆರಳಿ ಕೇಂದ್ರ ಹಣಕಾಸು ಸಚಿವರೊಂದಿಗೆ ಮಾತುಕತೆ ನಡೆಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ ಮಹಿಳೆಯರಿಗೆ ಅನುಕೂಲ ಮಾಡಿ ಕೊಡಲಿರುವ ನಬಾರ್ಡ್ ಯೋಜನೆಗಳಿಗೆ ಸಂಬಂಧಿಸಿ ಮಾತುಕತೆ ನಡೆಸಿದ್ದೇನೆ. ಜೊತೆಗೆ ಜಿಎಸ್'ಟಿ ಸಂಗ್ರಹ ಹಾಗೂ ರಾಜ್ಯದ ಪಾಲಿನ ವಿಚಾರವನ್ನೂ ಮಾತುಕತೆ ವೇಳೆ ಪ್ರಸ್ತಾಪಿಸಿದ್ದೇನೆಂದು ಹೇಳಿದರು. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಭೇಟಿ ಮಾಡಲಿದ್ದೇನೆಂದು ತಿಳಿಸಿದ್ದರು.

ಬಳಿಕ ಕೇಂದ್ರ ತಂತ್ರಜ್ಞಾನ ಸಚಿವರೂ ಆಗಿರುವ ರೈಲ್ವೇ ಸಚಿವ ಅಶ್ವಿನ್ ರನ್ನು ಭೇಟಿಯಾದ ಬೊಮ್ಮಾಯಿಯವರು, ರಾಜ್ಯದ ರೈಲ್ವೇ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಹುಬ್ಬಳ್ಳಿ-ಅಂಕೋಲಾ ಮಾರ್ಗ ಇನ್ನೂ ನನೆಗುದಿಗೆ ಬಿದ್ದಿದ್ದು, ಆದಷ್ಟು ಬೇಗ ಈ ಯೋಜನೆ ಕಾರ್ಯಗತಗೊಳಿಸಬೇಕು. ರೂ.4,300 ಕೋಟಿ ವೆಚ್ಚದಲ್ಲಿ ಭಾರತ್ ನೆಟ್ ಯೋಜನೆಯಡಿ ಕರ್ನಾಟಕವನ್ನೂ ಸೇರಿಸಿಕೊಳ್ಳಬೇಕಎಂದು ಮನವಿ ಸಲ್ಲಿಸಿದರು. ಜೊತೆಗೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ಕುರಿತೂ ಮಾತುಕತೆ ನಡೆಸಿದ್ದೇನೆಂದು ತಿಳಿಸಿದರು. 

ಇಂದು ಮುಖ್ಯಮಂತ್ರಿಗಳು ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಲಿದ್ದು, ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ಮಾತುಕತೆ ನಡೆಸಲಿದ್ದಾರೆ. 

ಇದಷ್ಟೇ ಅಲ್ಲದೆ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿಯವರನ್ನೂ ಭೇಟಿ ಮಾಡಲಿದ್ದು, ವಸತಿ ಯೋಜನೆ ಹಾಗೂ ಮೆಟ್ರೋ ಯೋಜನೆ ವಿಸ್ತರಣೆ ಕುರಿತು ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT