ಸಿದ್ದರಾಮಯ್ಯ 
ರಾಜಕೀಯ

ಇಂಧನ ಬೆಲೆ ಏರಿಕೆಗೆ ಕಾಂಗ್ರೆಸ್ ದೂರುವುದು ಕುಂಟುನೆಪ, ಬಿಜೆಪಿಯಿಂದ ಕಾಂಗ್ರೆಸ್-ಜೆಡಿಎಸ್ ಶಾಸಕರ ಖರೀದಿ: ಸಿದ್ದರಾಮಯ್ಯ

ಇಂಧನ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರವನ್ನು ದೂರುವುದು ಕುಂಟುನೆಪವಷ್ಟೆ. ಸತ್ಯಕ್ಕೆ ದೂರವಾದ ಮಾತು ಎಂದು ವಿಧಾನಸೌಧದಲ್ಲಿ ಸೋಮವಾರ ಕಲಾಪ ಆರಂಭಕ್ಕೆ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು: ಇಂಧನ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರವನ್ನು ದೂರುವುದು ಕುಂಟುನೆಪವಷ್ಟೆ. ಸತ್ಯಕ್ಕೆ ದೂರವಾದ ಮಾತು ಎಂದು ವಿಧಾನಸೌಧದಲ್ಲಿ ಸೋಮವಾರ ಕಲಾಪ ಆರಂಭಕ್ಕೆ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಇಂಧನ, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ಎತ್ತಿನ ಗಾಡಿ ಚಲೋ ಹಮ್ಮಿಕೊಂಡಿದ್ದರು. ಎತ್ತಿನ ಗಾಡಿಯಲ್ಲಿಯೇ ವಿಧಾನಸೌಧದ ಆವರಣದೊಳಗೆ ಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನೆಲ್ಲಾ ವೈಫಲ್ಯಕ್ಕೆ ಹಿಂದಿನ ಯುಪಿಎ ಸರ್ಕಾರವನ್ನೇ ಬೆರಳು ಮಾಡಿ ತೋರಿಸುತ್ತಿರುವುದು ಅದರ ವೈಫಲ್ಯವನ್ನು ಮುಚ್ಚಿಹಾಕುವ ತಂತ್ರಗಾರಿಕೆಯಷ್ಟೆ. ಅದೊಂದು ಕುಂಟುನೆಪ ಮಾತ್ರ. ಅಂದು 1 ಲಕ್ಷದ 30 ಸಾವಿರ ಸಾಲವಿತ್ತು. ಇಂದು ಕೇಂದ್ರ ಸರ್ಕಾರ ಸುಂಕ ತೆರಿಗೆ ಮೂಲಕ 24 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದೆ. 1 ಲಕ್ಷದ 30 ಸಾವಿರ ಕೋಟಿ ರೂಪಾಯಿ ಎಲ್ಲಿ, 24 ಲಕ್ಷ ಕೋಟಿ ರೂಪಾಯಿ ಎಲ್ಲಿ, ಬಿಜೆಪಿ ನಾಯಕರದ್ದು ಎಲ್ಲಿಂದೆಲ್ಲಿಯ ಹೋಲಿಕೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಬಿಜೆಪಿ ಹಣದ ಆಮಿಷವೊಡ್ಡಿದೆ. ಅಲ್ಲದೆ ಹಣ ನೀಡಿ ಪಕ್ಷಕ್ಕೆ ಕರೆಸಿಕೊಂಡಿದೆ, ಅದಕ್ಕೆ ಇತ್ತೀಚೆಗೆ ಶ್ರೀಮಂತ್ ಪಾಟೀಲ್ ಅವರು ನೀಡಿರುವ ಹೇಳಿಕೆಯೇ ಸಾಕ್ಷಿ. ಬಿಜೆಪಿ ಕಡೆಯಿಂದ ಶ್ರೀಮಂತ್ ಪಾಟೀಲ್ ಗೆ 25ರಿಂದ 35 ಕೋಟಿ ರೂಪಾಯಿ ಹೋಗಿದೆ, ಅವರು ಸರಿಯಾಗಿಯೇ ಹೇಳಿದ್ದಾರೆ ಎಂದು ಕೂಡ ಸಿದ್ದರಾಮಯ್ಯ ಟೀಕಿಸಿದರು.

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿಂದು ಎತ್ತಿನಗಾಡಿ ಚಲೋ ಹಮ್ಮಿಕೊಂಡಿತ್ತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದವರೆಗೂ ಎತ್ತಿನಗಾಡಿ ಮೂಲಕ ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT