ನರೇಂದ್ರ ಮೋದಿ 
ರಾಜಕೀಯ

ಬಿಜೆಪಿ ಪಾಲಿಗೆ ರಾಜಕೀಯವೆಂದರೆ ಕಳ್ಳದಂಧೆ; ಮೋದಿ ಅಣತಿಯಂತೆ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟ: ಕಾಂಗ್ರೆಸ್

ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಆಪರೇಷನ್ ಕಮಲಕ್ಕಾಗಿ ಹಣ ಹೂಡಿದ್ದೇಕೆ ಎಂದು ಭಾರತೀಯ ಜನತಾ ಪಕ್ಷವನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಆಪರೇಷನ್ ಕಮಲಕ್ಕಾಗಿ ಹಣ ಹೂಡಿದ್ದೇಕೆ ಎಂದು ಭಾರತೀಯ ಜನತಾ ಪಕ್ಷವನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್,  ಬಿಜೆಪಿಯ ಆಂತರಿಕ ಕಿತ್ತಾಟದಲ್ಲಿ ಸಿಪಿ ಯೋಗೀಶ್ವರ್ ಆಪರೇಷನ್ ಕಮಲಕ್ಕಾಗಿ 9 ಕೋಟಿ ಸಾಲ ಮಾಡಿದ್ದರು ಎಂಬ ಅಂಶ ಬಯಲಾಗಿತ್ತು, ಸಾಲ ಮಾಡಿದ್ದೇಕೆ? ಯಾಕಾಗಿ ಈ ಬಂಡವಾಳ ಹೂಡಿಕೆ? ಬಿಜೆಪಿ ಪಾಲಿಗೆ ರಾಜಕೀಯವೆಂದರೆ 'ಕಳ್ಳದಂಧೆ'ಯಾಗಿದೆ.

ಈ ಎಲ್ಲಾ ಭ್ರಷ್ಟಾಚಾರಗಳು ಮೋದಿಯವರ ಅಣತಿಯಂತೆ ನಡೆಯುತ್ತಿರುವುದು ಸ್ಪಷ್ಟ. ಪೆಟ್ರೋಲ್ ಡೀಸೆಲ್‌ಗಳ ಬೆಲೆ ಏರಿಕೆಯಿಂದ ಇಡೀ ಅರ್ಥ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ, ಬಹುತೇಕ ವಸ್ತುಗಳ ಬೆಲೆ ಏರಿಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಲಿದೆ. ಆರ್ಥಿಕ ಚಟುವಟಿಕೆಗಳು ಕುಂಠಿತಗೊಳ್ಳಲಿವೆ. ಆದರೆ ಬಿಜೆಪಿ ಸರ್ಕಾರ ತೆರಿಗೆ ಇಳಿಸುವ ಸಣ್ಣ ಮನಸ್ಸನ್ನೂ ಮಾಡದೆ ನಿರ್ದಯವಾಗಿ ನಡೆದುಕೊಳ್ಳುತ್ತಿದೆ ಭ್ರಷ್ಟ ಬಿಜೆಪಿ ಸರ್ಕಾರ ಎಂದು ಟಾಂಗ್ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT