ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

ಕಾಂಗ್ರೆಸ್ ಪ್ರತಿಭಟನೆಗೆ ಸದನದಲ್ಲಿ ಉತ್ತರ ಕೊಡುತ್ತೇನೆ: ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ವಿಧಾನಮಂಡಲ ಕಲಾಪ ಆರಂಭದ ಹೊತ್ತಲ್ಲೇ ಪ್ರತಿಭಟನೆಯ ಬಿಸಿ ತಟ್ಟಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧಕ್ಕೆ ಎತ್ತಿನಗಾಡಿ ಚಲೋ ಹಮ್ಮಿಕೊಂಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ವಿಧಾನಮಂಡಲ ಕಲಾಪ ಆರಂಭದ ಹೊತ್ತಲ್ಲೇ ಪ್ರತಿಭಟನೆಯ ಬಿಸಿ ತಟ್ಟಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧಕ್ಕೆ ಎತ್ತಿನಗಾಡಿ ಚಲೋ ಹಮ್ಮಿಕೊಂಡಿದ್ದಾರೆ.

ಈ ಬಗ್ಗೆ ಇಂದು ವಿಧಾಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಯುಪಿಎ ಸರ್ಕಾರ ಅವಧಿಯಲ್ಲಿ ಡಾ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಬೆಲೆ ಏರಿಕೆಯಾಗಿದ್ದು. ಆಗ ಪ್ರತಿಭಟನೆ ಮಾಡುತ್ತಿದ್ದರು ಇದಕ್ಕೆ ಅರ್ಥವಿರುತ್ತಿತ್ತು ಎಂದಿದ್ದಾರೆ.

ಸದನದಲ್ಲಿ ಕಲಾಪ ವೇಳೆ ಕಾಂಗ್ರೆಸ್ ನಾಯಕರು ಇದನ್ನು ಪ್ರಸ್ತಾಪಿಸುತ್ತಾರೆ ಎಂದು ನನಗೆ ಚೆನ್ನಾಗಿ ಗೊತ್ತಿದೆ. ಅವರಿಗೆ ಸದನದಲ್ಲಿಯೇ ತಕ್ಕ ಉತ್ತರ ನೀಡುತ್ತೇನೆ ಎಂದರು. ಸದ್ಯ ಕಾಂಗ್ರೆಸ್ ನಾಯಕರ ಎತ್ತಿನ ಗಾಡಿ ಚಲೋ ವಿಧಾನಸೌಧಕ್ಕೆ ತಲುಪಿದ್ದು ಇನ್ನು ಕೆಲವೇ ಹೊತ್ತಿನಲ್ಲಿ ಕಲಾಪ ಆರಂಭವಾಗಲಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT