ಲಕ್ಷ್ಮಣ್ ಸವದಿ 
ರಾಜಕೀಯ

ಹಣದ ಆಮಿಷ ಕುರಿತ ಹೇಳಿಕೆ: ಶ್ರೀಮಂತ ಪಾಟೀಲ್‌ ಜೊತೆ ಮಾತನಾಡುತ್ತೇನೆಂದ ಸವದಿ

ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಯಾರು ಹಣ ನೀಡಲು ಹೋಗಿದ್ದರು..? ಯಾರು ಆಮಿಷ ಒಡ್ಡಿದ್ದರು ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಮಾಜಿ ಉಪ ಮುಖಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ಹೇಳಿದ್ದಾರೆ.

ಬೆಳಗಾವಿ: ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಯಾರು ಹಣ ನೀಡಲು ಹೋಗಿದ್ದರು..? ಯಾರು ಆಮಿಷ ಒಡ್ಡಿದ್ದರು ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಮಾಜಿ ಉಪ ಮುಖಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ಹೇಳಿದ್ದಾರೆ.

ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶ್ರೀಮಂತ ಪಾಟೀಲ್‌ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೂ ಅವರಿಗೂ ಭೇಟಿ ಆಗಿಲ್ಲ. ಅವರಿಗೆ ಯಾರು ಹಣ ಕೊಡಲು ಹೋಗಿದ್ದರು? ಯಾರು ಆಮಿಷ ಒಡ್ಡಿದ್ದರು ಎಂಬುವುದು ಪರಿಶೀಲನೆ ಆಗಬೇಕು ಎಂದು ಹೇಳಿದರು. ‌

ಅಧಿಕಾರ ಶಾಶ್ವತವಲ್ಲ. ಅಧಿಕಾರದಲ್ಲಿ ಇದ್ದಾಗ ಮತ್ತು ಅವಕಾಶ ಕೊಟ್ಟಾಗ ಸದ್ಬಳಕೆ ಮಾಡಿಕೊಳ್ಳಬೇಕು. ಶ್ರೀಮಂತ ಪಾಟೀಲ್ ವೈಮನಸ್ಸಿನಿಂದ ಹಾಗೆ ಹೇಳಿದ್ದಾರೆ ಎಂದು ಅನ್ನಿಸುವುದಿಲ್ಲ. ಮಾತನಾಡುವ ಭರದಲ್ಲಿ ಆ ರೀತಿ ಹೇಳಿರಬಹುದು. ಈ ಬಗ್ಗೆ ಅವರನ್ನು ಖುದ್ದು ಭೇಟಿಯಾಗಿ ಮಾತನಾಡುವೆ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT