ಲಕ್ಷ್ಮಣ್ ಸವದಿ 
ರಾಜಕೀಯ

ಹಣದ ಆಮಿಷ ಕುರಿತ ಹೇಳಿಕೆ: ಶ್ರೀಮಂತ ಪಾಟೀಲ್‌ ಜೊತೆ ಮಾತನಾಡುತ್ತೇನೆಂದ ಸವದಿ

ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಯಾರು ಹಣ ನೀಡಲು ಹೋಗಿದ್ದರು..? ಯಾರು ಆಮಿಷ ಒಡ್ಡಿದ್ದರು ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಮಾಜಿ ಉಪ ಮುಖಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ಹೇಳಿದ್ದಾರೆ.

ಬೆಳಗಾವಿ: ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಯಾರು ಹಣ ನೀಡಲು ಹೋಗಿದ್ದರು..? ಯಾರು ಆಮಿಷ ಒಡ್ಡಿದ್ದರು ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಮಾಜಿ ಉಪ ಮುಖಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ಹೇಳಿದ್ದಾರೆ.

ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶ್ರೀಮಂತ ಪಾಟೀಲ್‌ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೂ ಅವರಿಗೂ ಭೇಟಿ ಆಗಿಲ್ಲ. ಅವರಿಗೆ ಯಾರು ಹಣ ಕೊಡಲು ಹೋಗಿದ್ದರು? ಯಾರು ಆಮಿಷ ಒಡ್ಡಿದ್ದರು ಎಂಬುವುದು ಪರಿಶೀಲನೆ ಆಗಬೇಕು ಎಂದು ಹೇಳಿದರು. ‌

ಅಧಿಕಾರ ಶಾಶ್ವತವಲ್ಲ. ಅಧಿಕಾರದಲ್ಲಿ ಇದ್ದಾಗ ಮತ್ತು ಅವಕಾಶ ಕೊಟ್ಟಾಗ ಸದ್ಬಳಕೆ ಮಾಡಿಕೊಳ್ಳಬೇಕು. ಶ್ರೀಮಂತ ಪಾಟೀಲ್ ವೈಮನಸ್ಸಿನಿಂದ ಹಾಗೆ ಹೇಳಿದ್ದಾರೆ ಎಂದು ಅನ್ನಿಸುವುದಿಲ್ಲ. ಮಾತನಾಡುವ ಭರದಲ್ಲಿ ಆ ರೀತಿ ಹೇಳಿರಬಹುದು. ಈ ಬಗ್ಗೆ ಅವರನ್ನು ಖುದ್ದು ಭೇಟಿಯಾಗಿ ಮಾತನಾಡುವೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ; ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಸಿದ್ದರಾಮಯ್ಯ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

SCROLL FOR NEXT