ಉಡುಪಿಯ ಚರ್ಚ್ ನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಮೃತದೇಹ 
ರಾಜಕೀಯ

ಆಸ್ಕರ್ ಫರ್ನಾಂಡಿಸ್ ಸಜ್ಜನ ರಾಜಕಾರಣಿ: ಸಿಎಂ ಬೊಮ್ಮಾಯಿ ಸಂತಾಪ; ಉಡುಪಿಗೆ ಮೃತದೇಹ ರವಾನೆ

ಕೇಂದ್ರ ಸರ್ಕಾರದ ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದು ಅವರ ಬಗ್ಗೆ ಉತ್ತಮ ಮಾತುಗಳನ್ನಾಡಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರದ ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದು ಅವರ ಬಗ್ಗೆ ಉತ್ತಮ ಮಾತುಗಳನ್ನಾಡಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಆಶ್ಕರ್ ಫರ್ನಾಂಡಿಸ್ ಶ್ರಮಜೀವಿಯಾಗಿದ್ದರು. ಕಲೆ, ಸಂಗೀತ ಪ್ರೇಮಿಯಾಗಿದ್ದ ಅವರು ಸ್ವತಃ ಮೌತ್ ಆರ್ಗನ್ ನುಡಿಸುತ್ತಿದ್ದರು. ರಾಜಕೀಯದಲ್ಲಿ ಆಜಾತ ಶತ್ರುವಾಗಿದ್ದರು, ಅವರನ್ನು ಕಳೆದುಕೊಂಡು ಬಹಳ ದುಃಖತಪ್ತರಾಗಿದ್ದೇವೆ ಎಂದು ಕಂಬನಿ ಮಿಡಿದಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಅವರು ಸಾಮಾನ್ಯ ಕುಟುಂಬದಿಂದ ಬಂದವರು, ಅವರ ಸೇವೆ ಮತ್ತು ನಿಷ್ಠೆಯಿಂದ ಈ ಮಟ್ಟಕ್ಕೆ ಬೆಳೆದವರು, ಕೇಂದ್ರ ಸಚಿವರಾಗಿ ಕರ್ನಾಟಕಕ್ಕೆ, ಕನ್ನಡಕ್ಕೆ ಸಾಕಷ್ಟು ಕೆಲಸ ಮಾಡಿದ್ದರು, ಮೃದು ಸ್ವಭಾವವನ್ನು ಹೊಂದಿದ್ದ ಅವರು ಸಜ್ಜನ, ಜನಪರ ರಾಜಕಾರಣಿ ಎಂದು ಶ್ಲಾಘಿಸಿದರು.

ಆಸ್ಕರ್ ಫರ್ನಾಂಡಿಸ್ ಅವರ ಮೃತದೇಹವನ್ನು ಇಂದು ಬೆಳಗ್ಗೆ ಮಂಗಳೂರಿನಿಂದ ಉಡುಪಿಗೆ ಕೊಂಡೊಯ್ಯಲಾಗಿದ್ದು, ಅಲ್ಲಿನ ಮದರ್ ಆಫ್ ಸೊರೊಸ್ ಚರ್ಚ್ ನಲ್ಲಿ ಕಾಂಗ್ರೆಸ್ ನಾಯಕರು ಅಂತಿಮ ದರ್ಶನ ಪಡೆದರು. ಚರ್ಚ್ ನಲ್ಲಿ ನಂತರ ಸಾರ್ವಜನಿಕ ಪ್ರಾರ್ಥನೆ ನಡೆಯಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT