ಸಿ.ಟಿ ರವಿ 
ರಾಜಕೀಯ

'ಬಾರ್ ಸಲಹೆಗಾರ ಸಿಟಿ ರವಿ ಮಾರ್ಗದರ್ಶನದಲ್ಲಿ ಬಾರ್ ತೆರೆದು, ಬಿಜೆಪಿ ಕಚೇರಿಯಲ್ಲಿ ಕುಡಿದು ಬಡಿದಾಡಿಕೊಳ್ಳಲಿ'

ಮಾನಪ್ಪ ವಜ್ಜಲ್‌ರ ಪುತ್ರರಿಂದ ಮಾರಣಾಂತಿಕ ಹಲ್ಲೆ ನಡೆದರೂ ದೂರು ದಾಖಲಿಸಲಿಲ್ಲ, ರಾಜ್ಯದಲ್ಲಿ ಅಧಿಕಾರದಲ್ಲಿರುವಬಿಜೆಪಿ ಸರ್ಕಾರ ಆಡಳಿತದಲ್ಲಿ ಯುಪಿ ಮಾಡೆಲ್ ಅನುಸರಿಸಿ ಕರ್ನಾಟಕವನ್ನು 'ಗೂಂಡಾರಾಜ್' ಆಗಿ ಪರಿವರ್ತಿಸುತ್ತಿದೆ ಎಂದು ಟೀಕಿಸಿದೆ.

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಉದ್ಯಮಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಹರಿ ಹಾಯ್ದಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮಾನಪ್ಪ ವಜ್ಜಲ್‌ರ ಪುತ್ರರಿಂದ ಮಾರಣಾಂತಿಕ ಹಲ್ಲೆ ನಡೆದರೂ ದೂರು ದಾಖಲಿಸಲಿಲ್ಲ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಆಡಳಿತದಲ್ಲಿ ಯುಪಿ ಮಾಡೆಲ್ ಅನುಸರಿಸಿ ಕರ್ನಾಟಕವನ್ನು 'ಗೂಂಡಾರಾಜ್' ಆಗಿ ಪರಿವರ್ತಿಸುತ್ತಿದೆ ಎಂದು ಟೀಕಿಸಿದೆ.

ಹಿಂದೆ ಗೋವಿಂದ್ ಕಾರಜೋಳರ ಪುತ್ರ ಪೊಲೀಸರಿಗೆ 'ಬಾಯಲ್ಲಿ ಬೂಟು ಇಡುತ್ತೇನೆ' ಎಂದು ಬೆದರಿಕೆಯೊಡ್ಡಿದ್ದ. ಇಂದು ಮಾನಪ್ಪ ವಜ್ಜಲ್ ಪುತ್ರರು ನಶೆಯಲ್ಲಿ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಿಜೆಪಿ ನಾಯಕರು ತಮ್ಮ ಪುತ್ರರನ್ನು ರೌಡಿಗಳನ್ನಾಗಿ ತಯಾರು ಮಾಡುತ್ತಿರುವಂತಿದೆ ಎಂದು ಲೇವಡಿ ಮಾಡಿದೆ.

ಬಿಜೆಪಿ ನಾಯಕರು, ನಾಯಕರ ಮಕ್ಕಳು ಕಂಡ ಕಂಡಲ್ಲಿ ಕುಡಿದು, ಕಂಡ ಕಂಡವರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇದರ ಬದಲು 'ಬಾರ್ ಸಲಹೆಗಾರ' ಸಿಟಿ ರವಿ ಮಾರ್ಗದರ್ಶನದಲ್ಲಿ ಬಿಜೆಪಿ ಕಛೇರಿಯಲ್ಲಿಯೇ ಬಾರ್ ತೆರೆದುಕೊಳ್ಳಲಿ. ಅಲ್ಲೇ ಕುಡಿದುಕೊಳ್ಳಲಿ, ಅಲ್ಲೇ ಬಡಿದುಕೊಳ್ಳಲಿ, ಜನರಿಗೆ ತೊಂದರೆ ಕೊಡುವುದನ್ನ ಬಿಡಲಿ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT