ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜಕೀಯ

ಸದನದ ಸಮಯ ಹಾಳು ಮಾಡುವ ಸದಸ್ಯರ ಪಟ್ಟಿ ಸಿದ್ದ: ಶೂನ್ಯವೇಳೆಯಲ್ಲಿ ಸ್ಪೀಕರ್ ಕಾಗೇರಿ ಗರಂ!

ವಿಧಾನಸಭೆಯ ಕಾರ್ಯಕಲಾಪಗಳಿಗೆ ಪದೇ, ಪದೇ ಅಡ್ಡಿಪಡಿಸುವ, ಸದನವನ್ನು ಹೀಗೆ ತಮ್ಮ ಮೂಗಿನ ನೇರಕ್ಕೆ ನಡೆಸಬೇಕು ಎಂದು ನಿಯಂತ್ರಣ ಮಾಡಿ, ಅನುಚಿತವಾಗಿ ವರ್ತಿಸಿ ಸದನದ ಸಮಯ ಹಾಳು ಮಾಡುವ ಸದಸ್ಯರ ಪಟ್ಟಿ ಸಿದ್ದವಾಗಿದೆ.

ಬೆಂಗಳೂರು: ವಿಧಾನಸಭೆಯ ಕಾರ್ಯಕಲಾಪಗಳಿಗೆ ಪದೇ, ಪದೇ ಅಡ್ಡಿಪಡಿಸುವ, ಸದನವನ್ನು ಹೀಗೆ ತಮ್ಮ ಮೂಗಿನ ನೇರಕ್ಕೆ ನಡೆಸಬೇಕು ಎಂದು ನಿಯಂತ್ರಣ ಮಾಡಿ, ಅನುಚಿತವಾಗಿ ವರ್ತಿಸಿ ಸದನದ ಸಮಯ ಹಾಳು ಮಾಡುವ ಸದಸ್ಯರ ಪಟ್ಟಿ ಸಿದ್ದವಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಎಚ್ಚರಿಸಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.

ಶೂನ್ಯವೇಳೆಯಲ್ಲಿ ಜೆಡಿಎಸ್ ಸದಸ್ಯರಾದ ಶಿವಲಿಂಗೇಗೌಡ, ಅನ್ನದಾನಿ, ಬಂಡೆಪ್ಪ ಕಾಶಂಪೂರ್ ಮತ್ತಿತರರು ಎದ್ದು ವಿಷಯ ಪ್ರಸ್ತಾಪಿಸಲು ಅವಕಾಶ ಮಾಡಿಕೊಡಬೇಕು ಎಂದು ಪಟ್ಟು ಹಿಡಿದಾಗ ಸ್ಪೀಕರ್ ಕಾಗೇರಿ ಗರಂ ಆದರು.

ಸದನದ ಕಾರ್ಯಕಲಾಪಗಳನ್ನು ನಡೆಸುವ ಗುರುತರ ಹೊಣೆಗಾರಿಕೆ ನನ್ನ ಮೇಲಿದೆ. ಆದರೆ, ಸದನದ ನಾಯಕರ ಸಹಕಾರ ಇಲ್ಲದೇ ನಾನೊಬ್ಬನೇ ಏಕಾಂಗಿಯಾಗಿ ನಿರ್ವಹಣೆ ಮಾಡುವುದು ಸಾಧ್ಯವಿಲ್ಲ. ಬಹಳ ಭಾರವಾದ ಮನಸ್ಸಿನಿಂದ ಅನುಚಿತ ಸದಸ್ಯರಪಟ್ಟಿಯನ್ನು ಸಿದ್ದಪಡಿಸಲಾಗಿದೆ. ಇದು ನನಗೆ ಸಂತೋಷ, ನೆಮ್ಮದಿ, ಸಮಾಧಾನ ಕೊಡುವ ವಿಚಾರ ಅಲ್ಲ. ಆದರೆ ಸದಸ್ಯರು ಮೀತಿ ವರ್ತಿಸಿದರೆ ನಾನು ಮೌನಕ್ಕೆ ಶರಣಾಗಲಾರೆ. ಕಠಿಣ ಕ್ರಮ ಜರುಗಿಸುವುದಾಗಿ ಸ್ಪೀಕರ್ ನೇರ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT