ರಾಜ್ಯಕ್ಕೆ ಆಗಮಿಸಿದ ಲೋಕಸಭಾ ಸ್ಪೀಕರ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಭಿನಂದನೆ ಸಲ್ಲಿಸಿದರು 
ರಾಜಕೀಯ

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಷಣ: ಕಾಂಗ್ರೆಸ್ ನಿಂದ ಬಹಿಷ್ಕಾರ

ಲೋಕಸಭಾ ಸ್ಪೀಕರ್ ಓಂ. ಬಿರ್ಲಾ ಶುಕ್ರವಾರ ಅಪರಾಹ್ನ 2.30ಕ್ಕೆ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆದರೆ ಇದೊಂದು ಕೆಟ್ಟ ಸಂಪ್ರದಾಯವಾಗಿದ್ದು, ಇದರಲ್ಲಿ ನಾವು ಭಾಗವಹಿಸುವುದಿಲ್ಲ, ಬಹಿಷ್ಕರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಬೆಂಗಳೂರು: ಲೋಕಸಭಾ ಸ್ಪೀಕರ್ ಓಂ. ಬಿರ್ಲಾ ಶುಕ್ರವಾರ ಅಪರಾಹ್ನ 2.30ಕ್ಕೆ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆದರೆ ಇದೊಂದು ಕೆಟ್ಟ ಸಂಪ್ರದಾಯವಾಗಿದ್ದು, ಇದರಲ್ಲಿ ನಾವು ಭಾಗವಹಿಸುವುದಿಲ್ಲ, ಬಹಿಷ್ಕರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಇಂದು ವಿಧಾನಸೌಧಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಟಾಂಗಾ ಜಾಥಾ ನಡೆಸಿ ಬಂದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಂದು ಮಧ್ಯಾಹ್ನ ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದೆ.ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ’ಪ್ರಜಾಪ್ರಭುತ್ವ-ಸಂಸದೀಯ ಮೌಲ್ಯಗಳ ರಕ್ಷಣೆ’ ವಿಷಯವಾಗಿ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಅವರ ಭಾಷಣದ ಬಗ್ಗೆ ವಿಧಾನಸಭೆಯಾಗಲಿ, ವಿಧಾನಪರಿಷತ್ ವಿಪಕ್ಷ ನಾಯಕರನ್ನು ಸಂಪರ್ಕಿಸಿ ನಮ್ಮ ಪ್ರತಿಕ್ರಿಯೆಯನ್ನು ಸರ್ಕಾರ ಕೇಳಿರಲಿಲ್ಲ. ಲೋಕಸಭಾ ಸ್ಪೀಕರ್ ಇಲ್ಲಿಗೆ ಬಂದು ಮಾತನಾಡುವ ಅಗತ್ಯವೇನಿದೆ, ಇದೊಂದು ಕೆಟ್ಟ ಸಂಪ್ರದಾಯ, ಹೀಗಾಗಿ ನಾವು ಬಹಿಷ್ಕರಿಸುತ್ತಿದ್ದೇವೆ, ನಾವು ಲೋಕಸಭಾ ಸ್ಪೀಕರ್ ಭಾಷಣ ಕೇಳಲು ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

ಲೋಕಸಭಾ ಸ್ಪೀಕರ್ ಅವರು ವಿಧಾನಮಂಡಲದ‌ ಉಭಯ ಸದನದಲ್ಲಿ ಭಾಷಣ ಮಾಡುವ ಬಗ್ಗೆ  ಸರ್ಕಾರ ನಮ್ಮೊಂದಿಗೆ ಚರ್ಚಿಸಿಲ್ಲ. ಹೀಗೆ ಭಾಷಣ ಮಾಡಿಸುವುದು ಸಂಸದೀಯ ವ್ಯವಸ್ಥೆಗೆ ವಿರುದ್ಧ, ಬ್ಯಾಂಕ್ವೆಟ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಸುವ ನಮ್ಮ ಸಲಹೆಯನ್ನೂ ಪರಿಗಣಿಸದ ಕಾರಣ ನಾವು ಈ ಕಾರ್ಯಕ್ರಮವನ್ನು  ಬಹಿಷ್ಕರಿಸುತ್ತೇವೆ ಎಂದು ಸಿದ್ದರಾಮಯ್ಯ ಕೂಡ ತಿಳಿಸಿದ್ದಾರೆ.

ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ’ಪ್ರಜಾಪ್ರಭುತ್ವ-ಸಂಸದೀಯ ಮೌಲ್ಯಗಳ ರಕ್ಷಣೆ’ ವಿಷಯ ಕುರಿತು ಭಾಷಣ ಮಾಡಲಿದ್ದಾರೆ. ಈ ವೇಳೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದು, ಇದೇ ವೇಳೆ ವಿಧಾನಸಭೆಯ ಶಾಸಕರೊಬ್ಬರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಲೋಕಸಭಾಧ್ಯಕ್ಷರು ಪ್ರದಾನ ಮಾಡಲಿದ್ದಾರೆ.

ಬಿಜೆಪಿಯ ಶಾಸಕರೆಲ್ಲರೂ ಭಾಗವಹಿಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT