ರಾಜ್ಯಕ್ಕೆ ಆಗಮಿಸಿದ ಲೋಕಸಭಾ ಸ್ಪೀಕರ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಭಿನಂದನೆ ಸಲ್ಲಿಸಿದರು 
ರಾಜಕೀಯ

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಷಣ: ಕಾಂಗ್ರೆಸ್ ನಿಂದ ಬಹಿಷ್ಕಾರ

ಲೋಕಸಭಾ ಸ್ಪೀಕರ್ ಓಂ. ಬಿರ್ಲಾ ಶುಕ್ರವಾರ ಅಪರಾಹ್ನ 2.30ಕ್ಕೆ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆದರೆ ಇದೊಂದು ಕೆಟ್ಟ ಸಂಪ್ರದಾಯವಾಗಿದ್ದು, ಇದರಲ್ಲಿ ನಾವು ಭಾಗವಹಿಸುವುದಿಲ್ಲ, ಬಹಿಷ್ಕರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಬೆಂಗಳೂರು: ಲೋಕಸಭಾ ಸ್ಪೀಕರ್ ಓಂ. ಬಿರ್ಲಾ ಶುಕ್ರವಾರ ಅಪರಾಹ್ನ 2.30ಕ್ಕೆ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆದರೆ ಇದೊಂದು ಕೆಟ್ಟ ಸಂಪ್ರದಾಯವಾಗಿದ್ದು, ಇದರಲ್ಲಿ ನಾವು ಭಾಗವಹಿಸುವುದಿಲ್ಲ, ಬಹಿಷ್ಕರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಇಂದು ವಿಧಾನಸೌಧಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಟಾಂಗಾ ಜಾಥಾ ನಡೆಸಿ ಬಂದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಂದು ಮಧ್ಯಾಹ್ನ ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದೆ.ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ’ಪ್ರಜಾಪ್ರಭುತ್ವ-ಸಂಸದೀಯ ಮೌಲ್ಯಗಳ ರಕ್ಷಣೆ’ ವಿಷಯವಾಗಿ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಅವರ ಭಾಷಣದ ಬಗ್ಗೆ ವಿಧಾನಸಭೆಯಾಗಲಿ, ವಿಧಾನಪರಿಷತ್ ವಿಪಕ್ಷ ನಾಯಕರನ್ನು ಸಂಪರ್ಕಿಸಿ ನಮ್ಮ ಪ್ರತಿಕ್ರಿಯೆಯನ್ನು ಸರ್ಕಾರ ಕೇಳಿರಲಿಲ್ಲ. ಲೋಕಸಭಾ ಸ್ಪೀಕರ್ ಇಲ್ಲಿಗೆ ಬಂದು ಮಾತನಾಡುವ ಅಗತ್ಯವೇನಿದೆ, ಇದೊಂದು ಕೆಟ್ಟ ಸಂಪ್ರದಾಯ, ಹೀಗಾಗಿ ನಾವು ಬಹಿಷ್ಕರಿಸುತ್ತಿದ್ದೇವೆ, ನಾವು ಲೋಕಸಭಾ ಸ್ಪೀಕರ್ ಭಾಷಣ ಕೇಳಲು ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

ಲೋಕಸಭಾ ಸ್ಪೀಕರ್ ಅವರು ವಿಧಾನಮಂಡಲದ‌ ಉಭಯ ಸದನದಲ್ಲಿ ಭಾಷಣ ಮಾಡುವ ಬಗ್ಗೆ  ಸರ್ಕಾರ ನಮ್ಮೊಂದಿಗೆ ಚರ್ಚಿಸಿಲ್ಲ. ಹೀಗೆ ಭಾಷಣ ಮಾಡಿಸುವುದು ಸಂಸದೀಯ ವ್ಯವಸ್ಥೆಗೆ ವಿರುದ್ಧ, ಬ್ಯಾಂಕ್ವೆಟ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಸುವ ನಮ್ಮ ಸಲಹೆಯನ್ನೂ ಪರಿಗಣಿಸದ ಕಾರಣ ನಾವು ಈ ಕಾರ್ಯಕ್ರಮವನ್ನು  ಬಹಿಷ್ಕರಿಸುತ್ತೇವೆ ಎಂದು ಸಿದ್ದರಾಮಯ್ಯ ಕೂಡ ತಿಳಿಸಿದ್ದಾರೆ.

ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ’ಪ್ರಜಾಪ್ರಭುತ್ವ-ಸಂಸದೀಯ ಮೌಲ್ಯಗಳ ರಕ್ಷಣೆ’ ವಿಷಯ ಕುರಿತು ಭಾಷಣ ಮಾಡಲಿದ್ದಾರೆ. ಈ ವೇಳೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದು, ಇದೇ ವೇಳೆ ವಿಧಾನಸಭೆಯ ಶಾಸಕರೊಬ್ಬರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಲೋಕಸಭಾಧ್ಯಕ್ಷರು ಪ್ರದಾನ ಮಾಡಲಿದ್ದಾರೆ.

ಬಿಜೆಪಿಯ ಶಾಸಕರೆಲ್ಲರೂ ಭಾಗವಹಿಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT