ಬಸವರಾಜ ಬೊಮ್ಮಾಯಿ 
ರಾಜಕೀಯ

'ಗುಲಾಮಗಿರಿ ಸಂಸ್ಕೃತಿಯ ಬಿಜೆಪಿಯಲ್ಲಿ ಮೋದಿ- ಶಾ ಜೋಡಿಯ ಬೂಟು ನೆಕ್ಕುವ ನಿಯಮ ಕಡ್ಡಾಯ'

ಬಿಜೆಪಿ ದೇಶಭಕ್ತಿ ಹೊಂದಿರುವ ಪಕ್ಷ, ಕಾಂಗ್ರೆಸ್ ಗುಲಾಮಗಿರಿ ಪಾರ್ಟಿ ಎಂದು ಮುಖ್ಯಮಂತ್ರಿ ಬಸವರಾಜಜ ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಬೆಂಗಳೂರು: ಬಿಜೆಪಿ ದೇಶಭಕ್ತಿ ಹೊಂದಿರುವ ಪಕ್ಷ, ಕಾಂಗ್ರೆಸ್ ಗುಲಾಮಗಿರಿ ಪಾರ್ಟಿ ಎಂದು ಮುಖ್ಯಮಂತ್ರಿ ಬಸವರಾಜಜ ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಪಕ್ಷ ಸಿಎಂ ಬೊಮ್ಮಾಯಿ ಅವರೇ ಇತ್ತೀಚೆಗಷ್ಟೇ ನಿಮ್ಮದೇ ಪಕ್ಷದ ಸುಬ್ರಮಣಿಯನ್ ಸ್ವಾಮಿ ಅವರು ಬಿಜೆಪಿಯಲ್ಲಿ ಬೂಟು ನೆಕ್ಕುವ ಗುಲಾಮರೇ ತುಂಬಿದ್ದಾರೆ ಎಂದು ತಿಳಿಸಿದ್ದು ನೆನಪಿದೆಯೇ? ಎಂದು ಪ್ರಶ್ನಿಸಿದೆ.

ಗುಲಾಮಗಿರಿ ಸಂಸ್ಕೃತಿಯ ಬಿಜೆಪಿಯಲ್ಲಿ ಮೋದಿ- ಅಮಿತ್ ಶಾ ಜೋಡಿಯ ಬೂಟು ನೆಕ್ಕುವ ಕಡ್ಡಾಯ ನಿಯಮವಿದೆ ಎಂದು ನಿಮ್ಮವರೇ ಹೇಳಿದ್ದಾರೆ! ಗುಲಾಮಗಿರಿ' ಬಿಜೆಪಿಗರಿಗೆ ರಕ್ತಗತವಾಗಿ ಬಂದ ಬಳುವಳಿ! ಎಂದು ಟಾಂಗ್ ನೀಡಿದೆ.

ಈ ಸಂಬಂಧ ಮತ್ತೊಂದು ಟ್ವೀಟ್ ಮಾಡಿರುವ ಕೆಪಿಸಿಸಿ , ಬೊಮ್ಮಾಯಿ ಅವರೇ ಬಿಜೆಪಿ ಹಾಗೂ ಬಿಜೆಪಿಯ ಪೂರ್ವಜರ ಗುಲಾಮಗಿರಿ ಎಂತಹದ್ದು ಎಂದು ಜಗತ್ತಿಗೇ ತಿಳಿದಿದೆ. ಅಂದು ಬ್ರಿಟಿಷರ ಕಂಪೆನಿ ಸರ್ಕಾರದ ಗುಲಾಮಗಿರಿ, ಇಂದು ಅಂಬಾನಿ - ಅದಾನಿಯಂತಹವರ ಕಂಪೆನಿಗಳ ಗುಲಾಮಗಿರಿ, ನಿಮ್ಮ ಪಕ್ಷದ ಸಿದ್ಧಾಂತವೇ ಹಿಟ್ಲರ್‌ನ ಗುಲಾಮಗಿರಿಯದ್ದು, ಕಾಂಗ್ರೆಸ್ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ನಿಮಗಿಲ್ಲ ಟ್ವಿಟ್ಟರ್ ನಲ್ಲಿ ತಪರಾಕಿ ಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT