ರಮೇಶ್ ಜಾರಕಿಹೊಳಿ 
ರಾಜಕೀಯ

ನನ್ನನ್ನು ಮತ್ತೆ ಮಂತ್ರಿ ಮಾಡಿ, ಇಲ್ಲವೇ ಸಹೋದರನಿಗಾದರೂ ಸಚಿವ ಸ್ಥಾನ ನೀಡಿ: ಸಿಎಂ ಬಳಿ ಜಾರಕಿಹೊಳಿ ದುಂಬಾಲು!

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸುದೀರ್ಘ 1 ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸುದೀರ್ಘ 1 ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

ರಾಜಕೀಯ ಪಿತೂರಿಗೆ ಬಲಿಪಶು ಆಗಿರು ತಮ್ಮನ್ನು ಮತ್ತೆ ಸಂಪುಟಕ್ಕ ಸೇರಿಸಿಕೊಳ್ಳಬೇಕೆಂದು ಬೆಳಗಾವಿ ಪ್ರಬಾವಿ ನಾಯಕ ರಮೇಶ್ ಜಾರಕಿಹೊಳಿ ಸಿಎಂ ಬಳಿ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ನನಗೆ ಸಚಿವ ಸ್ಥಾನ ನೀಡಲು ಸಾಧ್ಯವಾಗದಿದ್ದರೇ ತಮ್ಮ ಸಹೋದರ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗಾದರೂ ಸಂಪುಟದಲ್ಲಿ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬೊಮ್ಮಾಯಿ ಮುಂದಿನ ವಾರ ದೆಹಲಿಗೆ ತೆರಳುವ ಸಾಧ್ಯತೆಯಿದೆ, ಈ ವೇಳೆ ಖಾಲಿಯಿರುವ ನಾಲ್ಕು ಸಚಿವ ಸ್ಥಾನಗಳ ಭರ್ತಿ ಮತ್ತ ನಿಗಮ ಮಂಡಳಿಗಳ ನೇಮಕಾತಿ ಪಟ್ಟಿ ಅಂತಿಮಗೊಳಿಸುವ ನಿರೀಕ್ಷೆಯಿದೆ.

ಸರಿಯಾದ ಸಮಯದಲ್ಲಿ ಸೂಕ್ತಕ್ರಮ ಕೈಗೊಳ್ಳುವುದಾಗಿ ಬೊಮ್ಮಾಯಿ ಜಾರಕಿಹೊಳಿಗೆ ಭರವಸೆ ನೀಡಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಮತ್ತು ಇತರ ಚುನಾವಣೆಗಳಿಗೆ ಕೆಲವೇ ತಿಂಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸದ್ಯ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಬಯಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಸಂಪುಟಕ್ಕೆ ಮತ್ತೆ ಸೇರಿಕೊಳ್ಳಲು ರಮೇಶ್ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎಂದು ವಿಶ್ವಸಾರ್ಹ ಮೂಲಗಳು ತಿಳಿಸಿವೆ, ಆದರೆ ಮತ್ತೆ ಸಚಿವರಾಗಿ ಸಂಪುಟ ಸೇರುವುದು ಸುಲಭದ ಮಾತಲ್ಲ, ಮತ್ತೆ ಸರ್ಕಾರಕ್ಕೆ ಬೆದರಿಕೆ ಒಡ್ಡಬಹುದು. ಆದರೆ ವಾಲ್ಮೀಕಿ ಸಮುದಾಯದ ಮತ್ತೊಬ್ಬ ನಾಯಕ ಬಿ ಶ್ರೀರಾಮುಲು ಪಕ್ಷದಲ್ಲಿರುವುದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದೆ. ಸದ್ಯ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಹೈಕೋರ್ಟ್ ನಲ್ಲಿದ್ದು, ಕ್ಲೀನ್ ಚಿಟ್ ಪಡೆದರೇ ಮಾತ್ರ ಸಂಪುಟ ಸೇರಲು ಸಾಧ್ಯ.

ಸದ್ಯ ಇರುವ ಪರಿಸ್ಥಿತಿಯಲ್ಲಿ ಸಿಎಂ ಬೊಮ್ಮಾಯಿ ಜಾರಕಿಹೊಳಿ ಸಹೋದರರನ್ನು ಎದುರು ಹಾಕಿಕೊಳ್ಳುವುದಿಲ್ಲ, ಏಕೆಂದರೇ ಬೆಳಗಾವಿ ರಾಜಕೀಯವನ್ನು ಗಮನದರಲ್ಲಿರಿಸಿಕೊಂಡಿರುವ ಪಕ್ಷ, ರಮೇಶ್ ಬದಲಿಗೆ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video