ಬಸವರಾಜ ಬೊಮ್ಮಾಯಿ 
ರಾಜಕೀಯ

ಸಿಂಧಗಿ-ಹಾನಗಲ್ ವಿಧಾನಸಭೆ ಉಪಚುನಾವಣೆ: ಆರ್ ಎಸ್ ಎಸ್ ನಾಯಕರನ್ನು ಭೇಟಿ ಮಾಡಿದ ಬೊಮ್ಮಾಯಿ

ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬೆಂಗಳೂರಿನಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ತೆರಳಿ ನಾಯಕರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬೆಂಗಳೂರಿನಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ತೆರಳಿ ನಾಯಕರನ್ನು ಭೇಟಿ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಉಪ ಚುನಾವಣೆ ಮತ್ತಿತರ ವಿಷಯಗಳ ಬಗ್ಗೆ ಹಿರಿಯ ಆರ್ ಎಸ್ ಎಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ನಾಯಕರು ಕೆಲವು ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಸಿಎಂ ಬಸವರಾಜಬೊಮ್ಮಾಯಿ ಅವರ ನಾಯಕತ್ವಕ್ಕೆ ಅಗ್ನಿ ಪರೀಕ್ಷೆಯಾಗಿದೆ, ಬೊಮ್ಮಾಯಿ ನಾಯಕತ್ವದಲ್ಲಿ ಎದುರಾಗುತ್ತಿರುವ ಮೊದಲ ದೊಡ್ಡ ಚುನಾವಣೆ ಇದಾಗಿದೆ. ಹಾನಗಲ್ ಕ್ಷೇತ್ರ ಹಾವೇರಿಯಲ್ಲಿದ್ದು, ಸಿಎಂ ತವರು ಜಿಲ್ಲೆಯಾಗಿದೆ.

ಚುನಾವಣೆ ಕುರಿತಂತೆ. ದೇವಾಲಯಗಳ ತೆರವು, ಹಾಗೂ ರಾಷ್ಟ್ರೀಯ ಶಿಕ್ಷಣನೀತಿ ಜಾರಿಗೆ ತರುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಆರ್ ಎಸ್ ಎಸ್ ನಾಯಕರ ಜೊತೆ ಸಮಾಲೋಚಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!