ಲಕ್ಷ್ಮಿ ಹೆಬ್ಬಾಳ್ಕರ್ 
ರಾಜಕೀಯ

ನೈಟ್ ಪಾಲಿಟಿಕ್ಸ್ ಮಾಡಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದು: ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್

ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ.

ಬೆಳಗಾವಿ: ‘ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ರಸ್ತೆಗಳು ಹಾಳಾಗಿದ್ದವು. ಈ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವಿನ ಆರೋಪ-ಪ್ರತ್ಯಾರೋಪದ ವೇಳೆ ಸಂಜಯ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚುನಾವಣೆಗೆ ಮುನ್ನ, ನಾನು ನಿಮ್ಮ ಮನೆ ಮಗಳು ಎಂದೆಲ್ಲಾ ಹೇಳಿ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಿದ್ದರು. ಆ ಕನಸುಗಳನ್ನು ನನಸು ಮಾಡಲಾಗಿಲ್ಲ. ಹೀಗಾಗಿ, ಗ್ರಾಮೀಣ ಕ್ಷೇತ್ರದ ಜನರು ಪ್ರತಿಕ್ರಿಯೆ ಕೊಡಲು ಆರಂಭಿಸಿದ್ದಾರೆ. ಅದಕ್ಕೆ ಬಿಜೆಪಿಯ ಹೆಸರನ್ನು ಶಾಸಕಿ ಕೊಡುತ್ತಿದ್ದಾರೆ. ರಾತ್ರಿ ರಾಜಕೀಯ ಮಾಡುವುದು ಬಿಜೆಪಿ ಸಂಸ್ಕೃತಿಯಲ್ಲ. ಅದು ಕಾಂಗ್ರೆಸ್‌ನವರ ಸಂಸ್ಕೃತಿ’ ಎಂದು ಆರೋಪಿಸಿದರು.

ಕ್ಷೇತ್ರದಲ್ಲಿ ಅವರು ಹೇಳುತ್ತಿರುವ ಅಭಿವೃದ್ಧಿ ಹೊಳೆ ಎಲ್ಲಿದೆ ಎನ್ನುವುದನ್ನು ಹೇಳಿದರೆ ನಾನೂ ನೋಡಿಕೊಂಡು ಬರುತ್ತೇನೆ’ ಎಂದು ವ್ಯಂಗ್ಯವಾಡಿದರು. ‘ಹೆಬ್ಬಾಳಕರಗೆ ಸತ್ಯ ಒಪ್ಪಿಕೊಳ್ಳುವುದಕ್ಕೆ ಆಗುತ್ತಿಲ್ಲ. ಅವರು ಕೆಲಸ ಮಾಡೇ ಇಲ್ಲ ಎಂದು ಹೇಳಲಾಗುವುದಿಲ್ಲ. ಸಂವಿಧಾನದ ಪ್ರಕಾರ ಶಾಸಕರ ನಿಧಿಯಲ್ಲಿ ಒಂದಷ್ಟು ಕೆಲಸಗಳು ಸಹಜವಾಗಿಯೇ ನಡೆಯುತ್ತವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ; ರಾಜ್ಯಪಾಲ ಗೆಹ್ಲೋಟ್ ಇಂದೇ ಬೆಂಗಳೂರಿಗೆ ವಾಪಸ್

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT