ಲಕ್ಷ್ಮಿ ಹೆಬ್ಬಾಳ್ಕರ್ 
ರಾಜಕೀಯ

ನೈಟ್ ಪಾಲಿಟಿಕ್ಸ್ ಮಾಡಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದು: ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್

ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ.

ಬೆಳಗಾವಿ: ‘ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ರಸ್ತೆಗಳು ಹಾಳಾಗಿದ್ದವು. ಈ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವಿನ ಆರೋಪ-ಪ್ರತ್ಯಾರೋಪದ ವೇಳೆ ಸಂಜಯ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚುನಾವಣೆಗೆ ಮುನ್ನ, ನಾನು ನಿಮ್ಮ ಮನೆ ಮಗಳು ಎಂದೆಲ್ಲಾ ಹೇಳಿ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಿದ್ದರು. ಆ ಕನಸುಗಳನ್ನು ನನಸು ಮಾಡಲಾಗಿಲ್ಲ. ಹೀಗಾಗಿ, ಗ್ರಾಮೀಣ ಕ್ಷೇತ್ರದ ಜನರು ಪ್ರತಿಕ್ರಿಯೆ ಕೊಡಲು ಆರಂಭಿಸಿದ್ದಾರೆ. ಅದಕ್ಕೆ ಬಿಜೆಪಿಯ ಹೆಸರನ್ನು ಶಾಸಕಿ ಕೊಡುತ್ತಿದ್ದಾರೆ. ರಾತ್ರಿ ರಾಜಕೀಯ ಮಾಡುವುದು ಬಿಜೆಪಿ ಸಂಸ್ಕೃತಿಯಲ್ಲ. ಅದು ಕಾಂಗ್ರೆಸ್‌ನವರ ಸಂಸ್ಕೃತಿ’ ಎಂದು ಆರೋಪಿಸಿದರು.

ಕ್ಷೇತ್ರದಲ್ಲಿ ಅವರು ಹೇಳುತ್ತಿರುವ ಅಭಿವೃದ್ಧಿ ಹೊಳೆ ಎಲ್ಲಿದೆ ಎನ್ನುವುದನ್ನು ಹೇಳಿದರೆ ನಾನೂ ನೋಡಿಕೊಂಡು ಬರುತ್ತೇನೆ’ ಎಂದು ವ್ಯಂಗ್ಯವಾಡಿದರು. ‘ಹೆಬ್ಬಾಳಕರಗೆ ಸತ್ಯ ಒಪ್ಪಿಕೊಳ್ಳುವುದಕ್ಕೆ ಆಗುತ್ತಿಲ್ಲ. ಅವರು ಕೆಲಸ ಮಾಡೇ ಇಲ್ಲ ಎಂದು ಹೇಳಲಾಗುವುದಿಲ್ಲ. ಸಂವಿಧಾನದ ಪ್ರಕಾರ ಶಾಸಕರ ನಿಧಿಯಲ್ಲಿ ಒಂದಷ್ಟು ಕೆಲಸಗಳು ಸಹಜವಾಗಿಯೇ ನಡೆಯುತ್ತವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT