ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ: ಬಿಜೆಪಿ

ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ! ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಬೆಂಗಳೂರು: ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ! ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್‌ ಪಕ್ಷ ಮುಳುಗಲಿದೆ ಎಂಬುದರ ಸೂಚನೆಯಿದು ಎಂದು ಲೇವಡಿ ಮಾಡಿದೆ.

ಮುಂದಿನ ಚುನಾವಣೆಯಲ್ಲಿ ಕಣ್ಣೀರಿನ ಮೂಲಕವಾದರೂ ಇರುವ 30 ಉಳಿಸಿಕೊಳ್ಳಲು ಜೆಡಿಎಸ್‌ ಹೆಣಗಾಡುತ್ತಿದೆ. ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಆದರೆ ಚುನಾವಣೆ ಹತ್ತಿರದಲ್ಲಿರುವಾಗ ಜೆಡಿಎಸ್‌ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು. ಇಲ್ಲದ ಕಣ್ಣೀರು ಒತ್ತರಿಸಿ ಬರುವುದು ಇಲ್ಲಿ ಸಾಮಾನ್ಯ!

ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ ಎಂದು ಬಿಜೆಪಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT