ಸಿದ್ದರಾಮಯ್ಯ 
ರಾಜಕೀಯ

'ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ?': ಸಿದ್ದರಾಮಯ್ಯ ಕಿಡಿ

ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದ್ದು, ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ?ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಬೆಂಗಳೂರು: ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದ್ದು, ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ?ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ' ಸಂಕಲ್ಪ್ ಸೆ ಸಿದ್ಧಿ' ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

'ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ. ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು‌ ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು? ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು 'ಉತ್ತರ ಕುಮಾರ'ರ ಕಾಲಡಿ ಯಾಕೆ ಅಡವು ಇಡುತ್ತೀರಾ?. ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಇಂಥಾ ಗುಲಾಮಿ‌ ಮನಸ್ಥಿತಿ ಬರಬಾರದಿತ್ತು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT