ಕಾಂಗ್ರೆಸ್ ಮುಖಂಡರ ಸಭೆ 
ರಾಜಕೀಯ

'ರಾಹುಲ್' ಕಾಲದಲ್ಲಿ ಡಿಕೆಶಿ- ಸಿದ್ದರಾಮಯ್ಯ ಜೋಡಿ ತಬ್ಬಾಟ-ಮುದ್ದಾಟ: 'ರಾಹು' ಕಾಲದಲ್ಲಿ ಅಧಿಕಾರಕ್ಕಾಗಿ ಬರೇ ಕಿತ್ತಾಟ!

ರಾಹುಲ್ ಗಾಂಧಿ ಮುಂದೆ ಮಾಡಿದ ಎಲ್ಲಾ ನಾಟಕಗಳ ಮುಖವಾಡ ಕಳಚಿದೆ. ರಾಹುಲ್‌ ಗಾಂಧಿ ನಿರ್ದೇಶನದಂತೆ ಎಲ್ಲರೆದುರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಆದರೆ, ಒಪ್ಪಿಕೊಂಡಿಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಬೆಂಗಳೂರು: ರಾಹುಲ್ ಗಾಂಧಿ ಮುಂದೆ ಮಾಡಿದ ಎಲ್ಲಾ ನಾಟಕಗಳ ಮುಖವಾಡ ಕಳಚಿದೆ. ರಾಹುಲ್‌ ಗಾಂಧಿ ನಿರ್ದೇಶನದಂತೆ ಎಲ್ಲರೆದುರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಆದರೆ, ಒಪ್ಪಿಕೊಂಡಿಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ, ನಿಜ ಬಣ್ಣ ಬಯಲಾಗುತ್ತಿದೆ. ಕಾಂಗ್ರೆಸ್ ಹಮ್ಮಿಕೊಂಡಿರುವ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಪಾದಯಾತ್ರೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರನ್ನು ಹೊರಗಿಡಲಾಗುತ್ತಿದೆಯೇ? ಅಥವಾ ಪಕ್ಷದಿಂದಲೇ ನಡೆಯುವ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅತಿಥಿಯೇ? ಎಂದು ಪ್ರಶ್ನಿಸಿದೆ.

ರಾಹುಲ್ ಕಾಲದಲ್ಲಿ ಡಿಕೆಶಿ-ಸಿದ್ದರಾಮಯ್ಯ ಜೋಡಿ ಕೈ ಹಿಡಿದುಕೊಳ್ಳುವುದೇನು, ತಬ್ಬಿಕೊಳ್ಳುವುದೇನು!  ರಾಹು ಕಾಲದಲ್ಲಿ ಅಧಿಕಾರಕ್ಕಾಗಿ ಬರೇ ಕಿತ್ತಾಟ! ಎಂದು ಬಿಜೆಪಿ ಟ್ಟಿಟ್ಟರ್ ನಲ್ಲಿ ಟೀಕಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT