ಪ್ರಿಯಾಂಕಾ ಗಾಂಧಿ 
ರಾಜಕೀಯ

ರಾಹುಲ್ ನಂತರ, ಪ್ರಿಯಾಂಕಾ ಗಾಂಧಿಯನ್ನು ರಾಜ್ಯಕ್ಕೆ ಆಹ್ವಾನಿಸಿದ ಕೆಪಿಸಿಸಿ

2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ದು ಮಾಡಲು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕೆಪಿಸಿಸಿ ಆಹ್ವಾನಿಸಿದೆ.

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ದು ಮಾಡಲು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕೆಪಿಸಿಸಿ ಆಹ್ವಾನಿಸಿದೆ. ದಾವಣಗೆರೆಯಲ್ಲಿ ಇತ್ತೀಚಿಗೆ ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಜನ್ಮದಿನೋತ್ಸವದಲ್ಲಿ ಅವರ ಸಹೋದರ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾಗವಹಿಸಿದ್ದರು ಎಂಬುದನ್ನು ಗಮನಿಸಬಹುದು.

ಆಗಸ್ಟ್ 15 ರಂದು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುವ 'ಸ್ವಾತಂತ್ರ್ಯ ನಡಿಗೆ'ಯಲ್ಲಿ ಪಾಲ್ಗೊಳ್ಳುವಂತೆ ಪ್ರಿಯಾಂಕಾಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದು ರಾಜ್ಯಾದ್ಯಂತ ಒಂದು ವಾರದಿಂದ ನಡೆಯುತ್ತಿರುವ ಕಾಂಗ್ರೆಸ್‌ನ  ಸ್ವಾತಂತ್ರ್ಯದ ಅಮೃತ ಮಹೋತ್ಸವ ಪಾದಯಾತ್ರೆಯ ಸಮಾರೋಪ ಸಮಾರಂಭವಾಗಿದೆ.

ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರನ್ನೂ ಆಹ್ವಾನಿಸಿದ್ದೇವೆ. ಪ್ರಿಯಾಂಕಾ ಗಾಂಧಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಪ್ರಾರಂಭವಾಗುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆಯೇ ಅಥವಾ ಸಂಜೆ 4 ಗಂಟೆಗೆ ನಡೆಯಲಿರುವ ಸಾರ್ವಜನಿಕ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತಾರೆಯೇ ಎಂಬುದನ್ನು ಎಐಸಿಸಿ ಇನ್ನೂ ಖಚಿತಪಡಿಸಿಲ್ಲ ಎಂದು ಕಾಂಗ್ರೆಸ್ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಎರಡು ದಶಕಗಳ ಹಿಂದೆ 1999ರಲ್ಲಿ 13ನೇ ಲೋಕಸಭೆಗೆ ಬಳ್ಳಾರಿಯಿಂದ ಸ್ಪರ್ಧಿಸಿದ್ದ ಸೋನಿಯಾ ಗಾಂಧಿ ಅವರ ಪರವಾಗಿ  ಪ್ರಿಯಾಂಕಾ  ಪ್ರಚಾರ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಆಗ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಸೋನಿಯಾ ಸೋಲಿಸಿದ್ದರು. ಆದರೆ, ಸೋನಿಯಾ ಅಮೇಥಿಯನ್ನು ಉಳಿಸಿಕೊಂಡು ಬಳ್ಳಾರಿಗೆ ರಾಜೀನಾಮೆ ನೀಡಿದ್ದರು.

ಪ್ರಿಯಾಂಕಾ ಅವರ ಕರ್ನಾಟಕ ಭೇಟಿಯನ್ನು ರಾಜಕೀಯ ವಲಯದಲ್ಲಿ ಕುತೂಹಲದಿಂದ ನೋಡಲಾಗುತ್ತಿದೆ. ಪ್ರಿಯಾಂಕಾ ಅವರನ್ನು ಒಂದು ವರ್ಗದ ಜನರು ಇಂದಿರಾ ಗಾಂಧಿಯಂತೆ ನೋಡಲು ಬಯಸುತ್ತಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಇದು ಮುಂದಿನ ಚುನಾವಣೆಯಲ್ಲಿ ಶೇ 2-3 ರಷ್ಟು ಕಾಂಗ್ರೆಸ್ ಪರವಾಗಿ ಮತಗಳು ಬರಲು ನೆರವಾಗಲಿದೆ ಎಂದು ಅವರು ಹೇಳುತ್ತಾರೆ. 1978 ರಲ್ಲಿ, ಹಿಂದಿನ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಇಂದಿರಾ ಗಾಂಧಿ ಗೆದ್ದಿದ್ದರು, ಇದು ಅವರಿಗೆ ರಾಜಕೀಯ ಮರುಹುಟ್ಟು ನೀಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT