ಸಿದ್ದರಾಮಯ್ಯ 
ರಾಜಕೀಯ

ವರುಣಾ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ, ಇಲ್ಲಿಂದಲೇ ಸ್ಪರ್ಧಿಸಿ: ಸಿದ್ದರಾಮಯ್ಯಗೆ ಬೆಂಬಲಿಗರ ಒತ್ತಾಯ

ವರುಣಾ ಕ್ಷೇತ್ರ ಬಿಟ್ಟು  ಬೇರೆ ಯಾವ ಕ್ಷೇತ್ರಕ್ಕೂ ನೀವು ಹೋಗಬೇಡಿ. ವರುಣಾ ಕ್ಷೇತ್ರ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ. ಹೀಗಾಗಿ ಮತ್ತೆ ವರುಣಾದಿಂದಲೇ ಸ್ಪರ್ದೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವಿಪಕ್ಷ ನಾಯಕ ಸಿದ್ಧರಾಮಯ್ಯ ಸದ್ಯ ಕ್ಷೇತ್ರ ಹುಡುಕಾಟದಲ್ಲಿದ್ದು ಕೋಲಾರ, ಬೆಂಗಳೂರು ಸೇರಿ ಬೇರೆ ಬೇರೆ ಕಡೆಗಳಲ್ಲಿ ಸ್ಪರ್ಧಿಸಲು ಆಹ್ವಾನ ಬಂದಿದೆ. ಆದರೆ ಸಿದ್ಧರಾಮಯ್ಯ ಇನ್ನೂ ಕ್ಷೇತ್ರದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಈ ಮಧ್ಯೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಮನವಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾ ಕ್ಷೇತ್ರ ಬಿಟ್ಟು  ಬೇರೆ ಯಾವ ಕ್ಷೇತ್ರಕ್ಕೂ ನೀವು ಹೋಗಬೇಡಿ. ವರುಣಾ ಕ್ಷೇತ್ರ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ. ಹೀಗಾಗಿ ಮತ್ತೆ ವರುಣಾದಿಂದಲೇ ಸ್ಪರ್ಧೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನ ಪುತ್ರ ಯತೀಂದ್ರ ಸಿದ್ಧರಾಮಯ್ಯಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ಧ ಸಿದ್ಧರಾಮಯ್ಯ ಸೋಲನುಭವಿಸಿ ಬಾದಾಮಿ ಕ್ಷೇತ್ರದಲ್ಲಿ ಗೆಲುವು  ಸಾಧಿಸಿದ್ದರು. 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಕ್ಷ ಆಯೋಜಿಸಿದ್ದ ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಭಾಗವಹಿಸಿದ ಅನೇಕ ಕಾಂಗ್ರೆಸ್ಸಿಗರು ವರುಣಾದಿಂದಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT