ಅಶ್ವತ್ಥ ನಾರಾಯಣ 
ರಾಜಕೀಯ

ಅಧಿವೇಶನ ಕರೆದಾಗ 'ಎಲ್ಲಿದ್ದೀಯಪ್ಪಾ ಕುಮಾರಸ್ವಾಮಿ? 'ಎಂದು ಹುಡುಕಬೇಕು; 'ಬಂಡೆ' ಜೊತೆ ಎಚ್ ಡಿಕೆ: ಅಶ್ವತ್ಥ ನಾರಾಯಣ ವ್ಯಂಗ್ಯ

ಬಿಜೆಪಿ ಪಕ್ಷ ಮತ್ತು ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರವಾಗಿದೆ ಹೊರತು ಇದು ಯಾವುದೋ ಕಾಂಗ್ರೆಸ್, ಜೆಡಿಎಸ್ ನಂತೆ ಖಾಸಗಿ ಕಂಪನಿಯಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಬಿಜೆಪಿ ಪಕ್ಷ ಮತ್ತು ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರವಾಗಿದೆ ಹೊರತು ಇದು ಯಾವುದೋ ಕಾಂಗ್ರೆಸ್, ಜೆಡಿಎಸ್ ನಂತೆ ಖಾಸಗಿ ಕಂಪನಿಯಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರು ನಾಟಕ ಮಾಡ್ತಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಚಿವ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಯಾರಿಗಾದರೂ ಚೆನ್ನಾಗಿ ನಾಟಕ ಮಾಡೋಕೆ ಬರುತ್ತೆ ಅಂದರೆ ಅದು ಸಿದ್ದರಾಮಯ್ಯನವರಿಗೆ ಮಾತ್ರ. ನಾಟಕದ ಅನುಭವವನ್ನು ಅವರು ಬೇರೆಯವರಿಗೆ ಹೇಳ್ತಿದ್ದಾರೆ ಎಂದರು.

ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡೋದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲಿ ತಪ್ಪು, ಕಂಡು ಹಿಡಿಯೋದು, ದೋಷ ಎತ್ತಿ ಹಿಡಿಯೋದು ಸರಿಯಲ್ಲ. ಒಳ್ಳೆಯದು ಮಾಡೋಕೆ ಆಗಿಲ್ಲ ಅಂದರೆ ಸಮಾಜದಲ್ಲಿ ಗೊಂದಲ ಸೃಷ್ಟಿಸಬೇಡಿ. ಒಳ್ಳೆಯದು ಮಾಡೋಕೆ ಯೋಗ್ಯತೆ ಇಲ್ಲ ಅಂದರೆ ಕೆಟ್ಟದ್ದನ್ನು ಹೇಳಬೇಡಿ. ನಿಮ್ಮ ಭಕ್ತಿ ದೇಶದ ಮೇಲೆ ಇದ್ರೆ ತಮ್ಮ ಕರ್ತವ್ಯದ ಮೂಲಕ ಮಾಡಿ. ಅದು ಬಿಟ್ಟು ಇಂತಹ ಡೋಂಘಿ ಹೇಳಿಕೆಗಳನ್ನು ನಿಲ್ಲಿಸಿ ಎಂದು ಅಶ್ವಥ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದರು.

ಅಧಿವೇಶನ ಕರೆಯಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಎಲ್ಲಿದ್ಯಪ್ಪ ಕುಮಾರಸ್ವಾಮಿ..? ಎಂದು ಲೇವಡಿ ಮಾಡಿದರು. ಅಧಿವೇಶನ ಇದ್ದಾಗಲೇ ಕುಮಾರಸ್ವಾಮಿ ಸದನಕ್ಕೆ ಬರೋದಿಲ್ಲ. ಆಮೇಲೆ ಎಲ್ಲಿದ್ಯಪ್ಪ ಕುಮಾರಸ್ವಾಮಿ ಅಂತಾ ಅವರನ್ನು ಹುಡುಕಬೇಕು. ಸದನ ಕರೆಯಿರಿ ಅನ್ನೋದು ಆಮೇಲೆ ಬರದೆ ಇರೋದು. ಸಿದ್ದರಾಮಯ್ಯ ಮಾತಿನಂತೆ ಇವ್ರು ಮಾತಾಡ್ತಿರೋದು. ಬಾಯಿಗೆ ಬಂದಂತೆ ದಿಕ್ಕು ಇಲ್ಲದಂತೆ ಗುಂಡು ಹೊಡೆಯುತ್ತಿದ್ದಾರೆ ಎಂದರು.

ರಾಮನಗರ ಜಿಲ್ಲೆಯಲ್ಲಿ ನಾವು ಚೆನ್ನಾಗಿ ಕೆಲಸ ಮಾಡ್ತಿದ್ದೇವೆ ಎಂದ ಸಚಿವರು, ನಮ್ಮ ಪಕ್ಷ ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರ. ಇದು ಯಾವುದೋ, ಕಾಂಗ್ರೆಸ್, ಜೆಡಿಎಸ್ ನಂತೆ ಪ್ರವೈಟ್ ಕಂಪನಿ ತರ ಅಲ್ಲ. ನಮ್ಮಲ್ಲಿ ಯಾರು ಏನು ಬೇಕಾದರೂ ಆಗಬಹುದು. ಆದರೆ ಅಲ್ಲಿ ಕುಟುಂಬಕ್ಕಷ್ಟೇ ಅಧಿಕಾರ.

ಸೋನಿಯಾ ಗಾಂಧಿ ಕಂಪನಿ, ರಾಹುಲ್ ಗಾಂಧಿ ಕಂಪನಿ, ಪ್ರಿಯಾಂಕಾ ಗಾಂಧಿ ಕಂಪನಿ. ರಾಮನಗರದಲ್ಲಿ ಕುಮಾರಸ್ವಾಮಿದು ಒಂದು ಕಂಪನಿ. ಈ ಸಮಾಜದಲ್ಲಿ ಯಾವುದಾದರೂ ಅರ್ಥ ಇಲ್ಲದೆ ಇರೋ ಪಕ್ಷಗಳು ಅಂದರೆ ಇವುಗಳೇ. ಬರುವ ಚುನಾವಣೆಯಲ್ಲಿ ರಾಮನಗರದಲ್ಲಿ ನಾವು ಮೆಜಾರಿಟಿನೇ ತೆಗೆದುಕೊಳ್ತೇವೆ. ಅಲ್ಲಿ ಎಲ್ಲ ತರ ಇದ್ದಾರೆ, ಬಂಡೆ ಜೊತೆ ಕುಮಾರಸ್ವಾಮಿನೂ ಇದ್ದಾರೆ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT