ಮುಖ್ಯಮಂತ್ರಿ ಬೊಮ್ಮಾಯಿ 
ರಾಜಕೀಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಧಾರ ರಹಿತ, ಸುಳ್ಳು; ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡುವೆ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು  ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು. 

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು  ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು. 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ತಮ್ಮ ಸರ್ಕಾರ ಸುಭದ್ರವಾಗಿದೆ. ಭದ್ರವಾಗಿ ಮುಂದುವರೆಯಲಿದೆ ಎಂದರು. ಮುಂದಿನ ದಿನಗಳಲ್ಲಿ ಜನರ ಬಳಿಗೆ ಹೋಗುತ್ತೇನೆ ಮತ್ತು ರಾಜ್ಯದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೊಮ್ಮಾಯಿ,  ಕಾಂಗ್ರೆಸ್ ವರು ಏನೋ ಅಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ಹರಡಬೇಕೆಂದಿದ್ದಾರೆ. ಜನ ಯಾರೂ ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಸ್ಥಿತಪ್ರಜ್ಞನಾಗಿದ್ದೇನೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ವದಂತಿ ಹರಡುತ್ತಿಲ್ಲ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT