ಬಿಜೆಪಿ-ಕಾಂಗ್ರೆಸ್ 
ರಾಜಕೀಯ

ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ!

‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ’ ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ದೂರಿದೆ.

ಬೆಂಗಳೂರು: ‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ’ ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ದೂರಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದಿದೆ.

ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಈ ಮಾತುಗಳು ಅಷ್ಟು ಜನ  ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಒತ್ತಾಯಿಸಿದೆ.

ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ‌ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? ಯುಪಿಎ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದ ಕಾಂಗ್ರೆಸ್ ‌ನಾಯಕರು ಮಹಿಳೆಯರ ಮೇಲೆ ನಡೆಸಿದ 'ದಿಗ್ವಿಜಯ' 'ಅಭಿಷೇಕ'ಗಳ ಸಿಡಿ ನಿಮ್ಮ ಮಂಚದ ಸರ್ಕಾರದ ಫಲವಲ್ಲವೇ? ಎಂದು ಪ್ರಶ್ನಿಸಿದೆ.

ಮುಂದುವರಿದು, ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ 'ತಮ್ಮ ಮನೆಯ ಹೆಂಚು ತೂತು' ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೇ, ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಕಲಬುರಗಿಯ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ ಅವರು, ‘ಸರ್ಕಾರ ಹುದ್ದೆಗಳನ್ನು ಮಾರಾಟ ಮಾಡಲು ನಿಂತಿದೆ. ಯುವತಿಯರಿಗೆ ಉದ್ಯೋಗ ಬೇಕಾದರೆ ಮಂಚ ಹತ್ತಬೇಕು. ಯುವಕರಿಗೆ ಉದ್ಯೋಗ ಬೇಕಾದರೆ ಲಂಚ ಕೊಡಬೇಕು ಎನ್ನುವಂತಾಗಿದ್ದು, ಇದೊಂದು‌ ಲಂಚ–ಮಂಚದ ಸರ್ಕಾರ. ಯುವತಿಯ ಕೆಲಸ ಮಾಡಿಸಿಕೊಡಲು ಮಂಚ ಹತ್ತಲು ಸಚಿವರೊಬ್ಬರು ಹೇಳಿದ್ದರು. ಹಗರಣ ಬೆಳಕಿಗೆ ಬಂದ ಬಳಿಕ ಅವರು ರಾಜೀನಾಮೆ ನೀಡಿದ್ದೇ ನನ್ನ ಮಾತಿಗೆ ಸಾಕ್ಷಿಯಾಗಿದೆ’ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT