ರಂದೀಪ್ ಸುರ್ಜೇವಾಲಾ 
ರಾಜಕೀಯ

ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಸಿಎಂ: ರಣದೀಪ್ ಸುರ್ಜೆವಾಲಾ

ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದ್ದಾರೆ.

ಬೆಂಗಳೂರು: ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದ್ದಾರೆ.

ಶಿವಮೊಗ್ಗ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, 'ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬೊಮ್ಮಾಯಿ ಸರ್ಕಾರ ವಿಫಲವಾಗಿದ್ದು, ರಾಜ್ಯಾದ್ಯಂತ ಅವ್ಯವಸ್ಥೆ ತಲೆದೋರಿದೆ. ಬೊಮ್ಮಾಯಿ ಅವರು ದೇಶದ ಅತ್ಯಂತ ಅಸಮರ್ಥ ಮುಖ್ಯಮಂತ್ರಿಗಳಲ್ಲಿ ಒಬ್ಬರು ಮತ್ತು ಅವರು ಭ್ರಷ್ಟ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ ಎಂದು ಟೀಕಿಸಿದರು. 

“ಅಪರಾಧಿಗಳು ಮತ್ತು ಸಮಾಜ ವಿರೋಧಿಗಳು ಹಗಲು ಹೊತ್ತಿನಲ್ಲೇ ಅಮಾಯಕರನ್ನು ಹೇಗೆ ಕೊಲ್ಲುತ್ತಿದ್ದಾರೆ? ಸರ್ಕಾರ ಯಾಕೆ ಮೂಕಪ್ರೇಕ್ಷಕವಾಗಿದೆ? ಬಿಜೆಪಿ ಪ್ರಾಯೋಜಿತ ಸಮಾಜವನ್ನು ವಿಭಜಿಸುವ ಷಡ್ಯಂತ್ರಗಳ ವಿರುದ್ಧ ನಮ್ಮ ಪಕ್ಷದ ನಾಯಕರು ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ. ಜನರ ಸಹಕಾರದಿಂದ ಈ ಸರ್ಕಾರವನ್ನು ಕಿತ್ತೊಗೆಯುವವರೆಗೂ ನಾವು ವಿಶ್ರಮಿಸುವುದಿಲ್ಲ. ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಮತ್ತು ಕರಾವಳಿ ಕರ್ನಾಟಕ ಮತ್ತು ಶಿವಮೊಗ್ಗದಲ್ಲಿ ಹಿಂಸಾಚಾರವು ಬೊಮ್ಮಾಯಿ ಅವರ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಸುರ್ಜೇವಾಲ ಹೇಳಿದರು.

“ಈ ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ.. ಕೇವಲ ನಿರ್ವಹಣೆ ಮಾಡುತ್ತಿದ್ದೇವೆ ಎಂದು ಸ್ವತಃ ಕಾನೂನು ಸಚಿವ (ಜೆಸಿ ಮಾಧು ಸ್ವಾಮಿ) ಒಪ್ಪಿಕೊಂಡಿದ್ದಾರೆ. ಒಬ್ಬ ಸಚಿವರು ಇನ್ನೊಬ್ಬರನ್ನು ಟೀಕಿಸುತ್ತಿದ್ದಾರೆ ಎಂದು ಟೀಕಿಸಿದರು.

ಇದೇ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಮಾಧುಸ್ವಾಮಿ ಹೇಳಿದ್ದನ್ನ ಮುಚ್ಚಿಡಲು ಬೊಮ್ಮಾಯಿ ಸಚಿವರನ್ನು ನಿಯೋಜಿಸಿದ್ದಾರೆ. ಈ ಸರ್ಕಾರ ನಿಜವಾಗಿಯೂ ಕಾರ್ಯನಿರ್ವಹಿಸುತ್ತಿದೆಯೇ? ಎಂದು ಟೀಕಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT